ಶಿಕ್ಷಣ

ಶಿಕ್ಷಣ ಇಲಾಖೆಯ ವಿವಿಧ ಸೇವೆಗಳು, ಪ್ರಕ್ರಿಯೆಗಳ ಸರಳೀಕರಣಕ್ಕಾಗಿ ಕ್ರಮ : ಬಿ.ಸಿ. ನಾಗೇಶ್

ಬೆಂಗಳೂರು : ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಹಾಗೂ ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜನೆಗೆ ನಿರಾಕ್ಷೇಪಣಾ ಪತ್ರ (NOC) ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದೆ. ಅತ್ಯಂತ ಕಡಿಮೆ ಹಂತಗಳಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುತ್ತಿದೆ. ನೋಂದಣಿ, ನವೀಕರಣ ಮುಂತಾದ ಎಲ್ಲ ಪ್ರಕ್ರಿಯೆಗಳು ಈಗಾಗಲೇ ಆನ್‌ಲೈನ್‌ನಲ್ಲಿ ಲಭ್ಯವಿದ್ದು, ಇನ್ನಷ್ಟು ಸುಧಾರಿತ ರೀತಿಯಲ್ಲಿ ಎಲ್ಲ ಸೇವೆಗಳು ಶೀಘ್ರದಲ್ಲಿಯೇ ಆನ್‌ಲೈನ್ ಮೂಲಕ ಲಭ್ಯವಾಗಲಿವೆ. ಕಡಿಮೆ ಸಮಯದಲ್ಲಿ ಹೆಚ್ಚು ಪಾರದರ್ಶಕವಾಗಿ ಸೇವೆಗಳು ಲಭ್ಯವಾಗುತ್ತವೆ. ಈ ಕುರಿತಾದ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ’ ಎಂದು ಸಚಿವ ನಾಗೇಶ್ ಅವರು ತಿಳಿಸಿದ್ದಾರೆ.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

3 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

3 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

3 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

4 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

13 hours ago