ಶಿಕ್ಷಣ

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿ(SSLC time table 2023) ಪ್ರಕಟವಾಗಿದೆ. ಇಂದು (ಜನವರಿ 18) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ದಿನಾಂಕದಲ್ಲಿ ಒಂದು ಮಾರ್ಪಾಡು ಮಾಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದ್ದು ಪರೀಕ್ಷೆಗಳು ಬೆಳಗ್ಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರಗೆ ನಡೆಯಲಿವೆ.

‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ದಿನಾಂಕದಲ್ಲಿ ಒಂದು ಮಾರ್ಪಾಡು ಮಾಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

SSLC ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿ ಇಂತಿದೆ

 

ಮಾರ್ಚ್‌ 31-ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಸಂಸ್ಕೃತ
ಏಪ್ರಿಲ್‌ 3-ಗಣಿತ ಹಾಗೂ ಸಮಾಜ ಶಾಸ್ತ್ರ
ಏಪ್ರಿಲ್‌ 6-ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
ಏಪ್ರಿಲ್‌ 8-ಅರ್ಥಶಾಸ್ತ್ರ, ಏಪ್ರಿಲ್‌ 10-ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್‌ 12-ತೃತೀಯ ಭಾಷೆ ಇಂಗ್ಲಿಷ್, ಹಿಂದಿ, ಕನ್ನಡ, ಸಂಸ್ಕೃತ
ಏಪ್ರಿಲ್‌ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿ
ಕಳೆದ ಅಕ್ಟೋಬರ್ 29 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ (SSLC Annual Exam 2023) ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಏಪ್ರಿಲ್ 1ರಿಂದ ಏ, 15ರವರೆಗೆ ಪರೀಕ್ಷೆ ನಡೆಸಲು ದಿನಾಂಕ ‌ನಿಗದಿ ಮಾಡಿತ್ತು. ಅಲ್ಲದೇ ಇದಕ್ಕೆ ಯಾರದ್ದಾದರೂ ಆಕ್ಷೇಪಣೆ ಇದ್ದರೇ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆಯಲ್ಲಿ ತಿಳಿಸಿತ್ತು.

ಇನ್ನು 2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ದಿನಾಂಕ 09-3-2023 ರಿಂದ 29-3-2023ರ ವರೆಗೆ ಪರೀಕ್ಷೆಗಳು ನಡೆಯಲಿವೆ

andolanait

Share
Published by
andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

7 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

9 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

9 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

10 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

10 hours ago