ಶಿಕ್ಷಣ

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿ(SSLC time table 2023) ಪ್ರಕಟವಾಗಿದೆ. ಇಂದು (ಜನವರಿ 18) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ದಿನಾಂಕದಲ್ಲಿ ಒಂದು ಮಾರ್ಪಾಡು ಮಾಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದ್ದು ಪರೀಕ್ಷೆಗಳು ಬೆಳಗ್ಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರಗೆ ನಡೆಯಲಿವೆ.

‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ದಿನಾಂಕದಲ್ಲಿ ಒಂದು ಮಾರ್ಪಾಡು ಮಾಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

SSLC ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿ ಇಂತಿದೆ

 

ಮಾರ್ಚ್‌ 31-ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಸಂಸ್ಕೃತ
ಏಪ್ರಿಲ್‌ 3-ಗಣಿತ ಹಾಗೂ ಸಮಾಜ ಶಾಸ್ತ್ರ
ಏಪ್ರಿಲ್‌ 6-ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
ಏಪ್ರಿಲ್‌ 8-ಅರ್ಥಶಾಸ್ತ್ರ, ಏಪ್ರಿಲ್‌ 10-ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್‌ 12-ತೃತೀಯ ಭಾಷೆ ಇಂಗ್ಲಿಷ್, ಹಿಂದಿ, ಕನ್ನಡ, ಸಂಸ್ಕೃತ
ಏಪ್ರಿಲ್‌ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿ
ಕಳೆದ ಅಕ್ಟೋಬರ್ 29 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ (SSLC Annual Exam 2023) ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಏಪ್ರಿಲ್ 1ರಿಂದ ಏ, 15ರವರೆಗೆ ಪರೀಕ್ಷೆ ನಡೆಸಲು ದಿನಾಂಕ ‌ನಿಗದಿ ಮಾಡಿತ್ತು. ಅಲ್ಲದೇ ಇದಕ್ಕೆ ಯಾರದ್ದಾದರೂ ಆಕ್ಷೇಪಣೆ ಇದ್ದರೇ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆಯಲ್ಲಿ ತಿಳಿಸಿತ್ತು.

ಇನ್ನು 2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ದಿನಾಂಕ 09-3-2023 ರಿಂದ 29-3-2023ರ ವರೆಗೆ ಪರೀಕ್ಷೆಗಳು ನಡೆಯಲಿವೆ

andolanait

Share
Published by
andolanait

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago