ಶಿಕ್ಷಣ

ಬ್ಯಾಂಕ್‌ ಉದ್ಯೋಗ | ಬರೋಬ್ಬರಿ 13 ಸಾವಿರಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನಿಸಿದ IBPS

ಬೆಂಗಳೂರು : ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಬರೋಬ್ಬರಿ 13,217 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಆಫೀಸ್‌ ಅಸಿಸ್ಟಂಟ್‌, ಆಫೀಸರ್‌ ಮುಂತಾದ ಖಾಲಿ ಇದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 21 ಆಗಿದ್ದು, ಹೆಚ್ಚಿನ ಮಾಹಿತಿ ಹೀಗಿದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಆಫೀಸ್‌ ಅಸಿಸ್ಟಂಟ್‌-7,972 ಹುದ್ದೆ, ವಿದ್ಯಾರ್ಹತೆ: ದೇಶದ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ

ಆಫೀಸರ್‌ ಸ್ಕೇಲ್‌-I (ಅಸಿಸ್ಟಂಟ್‌ ಮ್ಯಾನೇಜರ್‌)-3,907 ಹುದ್ದೆ, ವಿದ್ಯಾರ್ಹತೆ: ದೇಶದ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ

ಆಫೀಸರ್‌ ಸ್ಕೇಲ್‌-II (ಮ್ಯಾನೇಜರ್‌)-1,139 ಹುದ್ದೆ, ವಿದ್ಯಾರ್ಹತೆ: ಸಿಎ, ಪದವಿ, ಎಲ್‌ಎಲ್‌ಬಿ, ಎಂಬಿಎ

ಆಫೀಸರ್‌ ಸ್ಕೇಲ್‌-III (ಸೀನಿಯರ್‌ ಮ್ಯಾನೇಜರ್‌)-199 ಹುದ್ದೆ, ವಿದ್ಯಾರ್ಹತೆ: ದೇಶದ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ

ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಜನರಲ್‌ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು 850 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಇಎಸ್‌ಎಂ / ಡಿಇಎಸ್‌ಎಂ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ
ಪ್ರಿಲಿಮಿನರಿ ಪರೀಕ್ಷೆ, ಮೇನ್‌ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪ್ರಿಲಿಮಿನರಿ ಪರೀಕ್ಷೆ ನವೆಂಬರ್‌ / ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಮೇನ್‌ ಪರೀಕ್ಷೆ ಡಿಸೆಂಬರ್‌ / ಫೆಬ್ರವರಿಯಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ https://ibps.in/ಗೆ ಭೇಟಿ ನೀಡಬಹುದು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

12 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

4 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

4 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

4 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

4 hours ago