ಬೆಂಗಳೂರು : ಸಿಬಿಎಸ್ಇ ನಕಲಿ ಪ್ರಮಾಣ ಪತ್ರ ಮಾಡಿ ಶಾಲೆ ನಡೆಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ರೂಪ್ಸಾ ಸಂಘಟನೆ ಅಧ್ಯಕ್ಷರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಎಸ್ಇ ನಕಲಿ ಪ್ರಮಾಣಪತ್ರ ಸಲ್ಲಿಸಿ ಶಾಲೆ ನಡೆಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ಪೆÇಲೀಸರು ಬಂಸಿ ವಿಚಾರಣೆ ನಡೆಸುತ್ತಿದ್ದಾರೆಂದರು.
ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಒತ್ತಾಯಿಸಿರುವ ಪ್ರಕರಣವನ್ನು ಸಿಬಿಐಗೆ ನೀಡುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಸಿಬಿಐಗೆ ನೀಡುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಯಾರೂ, ಯಾರನ್ನು ತೇಜೊವಧೆ ಮಾಡಬಾರದು. ಯಾರೇ ಆದರೂ ಕಾನೂನು ಕೈಗೆತ್ತುಕೊಂಡರೆ ಪೆÇಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಚುನಾವಣೆ ಆಯೋಗದ ಸೂಚನೆ ಮೇರೆಗೆ ಸ್ಯಾಂಟ್ರೋ ರವಿ ಕೇಸ್ ತನಿಖಾಕಾರಿಯನ್ನು ನಾವು ವರ್ಗಾವಣೆ ಮಾಡಿಲ್ಲ. ವರ್ಗಾವಣೆ ಆಗಿದೆ. ಚುನಾವಣೆ ಆಯೋಗದ ನಿಯಮ ಕಠಿಣವಾಗಿದೆ. ಈ ನಿಯಮದ ಅಡಿ ವರ್ಗಾವಣೆ ಕ್ರಮ ಆಗಿದೆ ಎಂದು ಮತ್ತೊಂದು ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಬೆಂಗಳೂರು: ಲೋಕ್ ಅದಾಲತ್ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…
ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…
ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…
ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…
ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…