ಶಿಕ್ಷಣ

ಕೇಂದ್ರ ಬಜೆಟ್‌ : ಕೊಡಗು, ಚಾ.ನಗರಕ್ಕೆ ನರ್ಸಿಂಗ್ ಕಾಲೇಜು

ರಾಜ್ಯಕ್ಕೆ ಧಕ್ಕಲಿರುವ ಒಂಬತ್ತು ನರ್ಸಿಂಗ್ ಕಾಲೇಜುಗಳು

ಮೈಸೂರು: ಬುಧವಾರ ಕೇಂದ್ರದ ಬಜೆಟ್‌ನಲ್ಲಿ ದೇಶದಾದ್ಯಂತ 156 ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಕುರಿತು ಆಗಿರುವ ಘೋಷಣೆ ಅನ್ವಯ ಕರ್ನಾಟಕಕ್ಕೆ ಚಾಮರಾಜನಗರ, ಕೊಡಗು ಸೇರಿದಂತೆ 9 ನರ್ಸಿಂಗ್ ಕಾಲೇಜುಗಳು ದೊರೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರತಿ ಜಿಲ್ಲೆಯಲ್ಲಿಯೂ ಒಂದು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸ್ಥಾಪನೆ ಆಗಬೇಕು ಎನ್ನುವ ನಿಲುವನ್ನು ಈಗಾಗಲೇ ಬಹಿರಂಗಪಡಿಸಿದ್ದು ಅದಕ್ಕೆ ತಕ್ಕಂತೆ ಸರ್ಕಾರ ಕಾರ್ಯಯೋಜನೆಯನ್ನು ರೂಪಿಸಿದೆ. ಇದರ ಮುಂದಿನ ಹಂತವಾಗಿ ನರ್ಸಿಂಗ್ ಕಾಲೇಜ್‌ಗಳ ಸ್ಥಾಪನೆಗೆ ಮುಂದಾಗಿದೆ. ತನ್ಮೂಲಕ ವೈದ್ಯಕೀಯ ಸೇವೆಯಲ್ಲಿ ನೈಪುಣ್ಯತೆಯನ್ನು ಕಾಪಾಡಿಕೊಳ್ಳುವ ಜತೆಗೆ ವೈದ್ಯರು ಮತ್ತು ದಾದಿಯರ ಸಂಖ್ಯೆಯನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸುವ ಪ್ರಯತ್ನಕ್ಕೆ ಸರ್ಕಾರ ಕೈಹಾಕಿದೆ.
2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾದ ಅನಂತರದಲ್ಲಿ ಸ್ಥಾಪನೆಯಾಗಿರುವ 175 ವೈದ್ಯಕೀಯ ಕಾಲೇಜ್‌ಗಳಲ್ಲಿ ಈ ನರ್ಸಿಂಗ್ ಕಾಲೇಜು ನಿರ್ಮಾಣವಾಗಲಿದೆ. ಈ ಮಾನದಂಡದ ಅನ್ವಯ ರಾಜ್ಯದಲ್ಲಿ 2014ರ ಬಳಿಕ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಕಲಬುರಗಿ, ಕಾರವಾರ, ಕೊಪ್ಪಳ, ಗದಗ ಮತ್ತು ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜ್ ಸ್ಥಾಪನೆಯಾಗಿದ್ದು ಇಲ್ಲಿ ನರ್ಸಿಂಗ್ ಕಾಲೇಜು ಕೂಡ ಬರುವ ಸಾಧ್ಯತೆಯಿದೆ.

ವೈದ್ಯಕೀಯ, ಔಷಧ ಕ್ಷೇತ್ರದ ಸಂಶೋಧನೆಗೆ ಅಡಿಪಾಯ: ಕೋವಿಡ್ ಸಾಂಕ್ರಾಮಿಕದ ಬಳಿಕ ವೈದ್ಯಕೀಯ ಮತ್ತು ಔಷಧ ಕ್ಷೇತ್ರಗಲ್ಲಿನ ಸಂಶೋಧನೆ ಮತ್ತು ಅನ್ವೇಷಣೆಯ ಮಹತ್ವವನ್ನು ಅರಿತಿರುವ ಸರ್ಕಾರ ಈ ರಂಗದಲ್ಲಿನ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದ ನಿರ್ವಹಣೆಯಲ್ಲಿನ ಖಾಸಗಿ, ಸರಕಾರಿ ಸಹಭಾಗಿತ್ವವನ್ನು ಸಂಶೋಧನ ವಲಯಕ್ಕೂ ಈ ಬಜೆಟ್ ಮೂಲಕ ವಿಸ್ತರಿಸಲಾಗಿದೆ.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

8 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

8 hours ago