ಶಿಕ್ಷಣ

ಕೇಂದ್ರ ಬಜೆಟ್‌ : ಕೊಡಗು, ಚಾ.ನಗರಕ್ಕೆ ನರ್ಸಿಂಗ್ ಕಾಲೇಜು

ರಾಜ್ಯಕ್ಕೆ ಧಕ್ಕಲಿರುವ ಒಂಬತ್ತು ನರ್ಸಿಂಗ್ ಕಾಲೇಜುಗಳು

ಮೈಸೂರು: ಬುಧವಾರ ಕೇಂದ್ರದ ಬಜೆಟ್‌ನಲ್ಲಿ ದೇಶದಾದ್ಯಂತ 156 ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಕುರಿತು ಆಗಿರುವ ಘೋಷಣೆ ಅನ್ವಯ ಕರ್ನಾಟಕಕ್ಕೆ ಚಾಮರಾಜನಗರ, ಕೊಡಗು ಸೇರಿದಂತೆ 9 ನರ್ಸಿಂಗ್ ಕಾಲೇಜುಗಳು ದೊರೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರತಿ ಜಿಲ್ಲೆಯಲ್ಲಿಯೂ ಒಂದು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸ್ಥಾಪನೆ ಆಗಬೇಕು ಎನ್ನುವ ನಿಲುವನ್ನು ಈಗಾಗಲೇ ಬಹಿರಂಗಪಡಿಸಿದ್ದು ಅದಕ್ಕೆ ತಕ್ಕಂತೆ ಸರ್ಕಾರ ಕಾರ್ಯಯೋಜನೆಯನ್ನು ರೂಪಿಸಿದೆ. ಇದರ ಮುಂದಿನ ಹಂತವಾಗಿ ನರ್ಸಿಂಗ್ ಕಾಲೇಜ್‌ಗಳ ಸ್ಥಾಪನೆಗೆ ಮುಂದಾಗಿದೆ. ತನ್ಮೂಲಕ ವೈದ್ಯಕೀಯ ಸೇವೆಯಲ್ಲಿ ನೈಪುಣ್ಯತೆಯನ್ನು ಕಾಪಾಡಿಕೊಳ್ಳುವ ಜತೆಗೆ ವೈದ್ಯರು ಮತ್ತು ದಾದಿಯರ ಸಂಖ್ಯೆಯನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸುವ ಪ್ರಯತ್ನಕ್ಕೆ ಸರ್ಕಾರ ಕೈಹಾಕಿದೆ.
2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾದ ಅನಂತರದಲ್ಲಿ ಸ್ಥಾಪನೆಯಾಗಿರುವ 175 ವೈದ್ಯಕೀಯ ಕಾಲೇಜ್‌ಗಳಲ್ಲಿ ಈ ನರ್ಸಿಂಗ್ ಕಾಲೇಜು ನಿರ್ಮಾಣವಾಗಲಿದೆ. ಈ ಮಾನದಂಡದ ಅನ್ವಯ ರಾಜ್ಯದಲ್ಲಿ 2014ರ ಬಳಿಕ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಕಲಬುರಗಿ, ಕಾರವಾರ, ಕೊಪ್ಪಳ, ಗದಗ ಮತ್ತು ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜ್ ಸ್ಥಾಪನೆಯಾಗಿದ್ದು ಇಲ್ಲಿ ನರ್ಸಿಂಗ್ ಕಾಲೇಜು ಕೂಡ ಬರುವ ಸಾಧ್ಯತೆಯಿದೆ.

ವೈದ್ಯಕೀಯ, ಔಷಧ ಕ್ಷೇತ್ರದ ಸಂಶೋಧನೆಗೆ ಅಡಿಪಾಯ: ಕೋವಿಡ್ ಸಾಂಕ್ರಾಮಿಕದ ಬಳಿಕ ವೈದ್ಯಕೀಯ ಮತ್ತು ಔಷಧ ಕ್ಷೇತ್ರಗಲ್ಲಿನ ಸಂಶೋಧನೆ ಮತ್ತು ಅನ್ವೇಷಣೆಯ ಮಹತ್ವವನ್ನು ಅರಿತಿರುವ ಸರ್ಕಾರ ಈ ರಂಗದಲ್ಲಿನ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದ ನಿರ್ವಹಣೆಯಲ್ಲಿನ ಖಾಸಗಿ, ಸರಕಾರಿ ಸಹಭಾಗಿತ್ವವನ್ನು ಸಂಶೋಧನ ವಲಯಕ್ಕೂ ಈ ಬಜೆಟ್ ಮೂಲಕ ವಿಸ್ತರಿಸಲಾಗಿದೆ.

andolanait

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

6 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

10 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

10 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

10 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

11 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

11 hours ago