ಶಿಕ್ಷಣ

ಕೇಂದ್ರ ಬಜೆಟ್‌ : ಕೊಡಗು, ಚಾ.ನಗರಕ್ಕೆ ನರ್ಸಿಂಗ್ ಕಾಲೇಜು

ರಾಜ್ಯಕ್ಕೆ ಧಕ್ಕಲಿರುವ ಒಂಬತ್ತು ನರ್ಸಿಂಗ್ ಕಾಲೇಜುಗಳು

ಮೈಸೂರು: ಬುಧವಾರ ಕೇಂದ್ರದ ಬಜೆಟ್‌ನಲ್ಲಿ ದೇಶದಾದ್ಯಂತ 156 ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಕುರಿತು ಆಗಿರುವ ಘೋಷಣೆ ಅನ್ವಯ ಕರ್ನಾಟಕಕ್ಕೆ ಚಾಮರಾಜನಗರ, ಕೊಡಗು ಸೇರಿದಂತೆ 9 ನರ್ಸಿಂಗ್ ಕಾಲೇಜುಗಳು ದೊರೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರತಿ ಜಿಲ್ಲೆಯಲ್ಲಿಯೂ ಒಂದು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸ್ಥಾಪನೆ ಆಗಬೇಕು ಎನ್ನುವ ನಿಲುವನ್ನು ಈಗಾಗಲೇ ಬಹಿರಂಗಪಡಿಸಿದ್ದು ಅದಕ್ಕೆ ತಕ್ಕಂತೆ ಸರ್ಕಾರ ಕಾರ್ಯಯೋಜನೆಯನ್ನು ರೂಪಿಸಿದೆ. ಇದರ ಮುಂದಿನ ಹಂತವಾಗಿ ನರ್ಸಿಂಗ್ ಕಾಲೇಜ್‌ಗಳ ಸ್ಥಾಪನೆಗೆ ಮುಂದಾಗಿದೆ. ತನ್ಮೂಲಕ ವೈದ್ಯಕೀಯ ಸೇವೆಯಲ್ಲಿ ನೈಪುಣ್ಯತೆಯನ್ನು ಕಾಪಾಡಿಕೊಳ್ಳುವ ಜತೆಗೆ ವೈದ್ಯರು ಮತ್ತು ದಾದಿಯರ ಸಂಖ್ಯೆಯನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸುವ ಪ್ರಯತ್ನಕ್ಕೆ ಸರ್ಕಾರ ಕೈಹಾಕಿದೆ.
2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾದ ಅನಂತರದಲ್ಲಿ ಸ್ಥಾಪನೆಯಾಗಿರುವ 175 ವೈದ್ಯಕೀಯ ಕಾಲೇಜ್‌ಗಳಲ್ಲಿ ಈ ನರ್ಸಿಂಗ್ ಕಾಲೇಜು ನಿರ್ಮಾಣವಾಗಲಿದೆ. ಈ ಮಾನದಂಡದ ಅನ್ವಯ ರಾಜ್ಯದಲ್ಲಿ 2014ರ ಬಳಿಕ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಕಲಬುರಗಿ, ಕಾರವಾರ, ಕೊಪ್ಪಳ, ಗದಗ ಮತ್ತು ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜ್ ಸ್ಥಾಪನೆಯಾಗಿದ್ದು ಇಲ್ಲಿ ನರ್ಸಿಂಗ್ ಕಾಲೇಜು ಕೂಡ ಬರುವ ಸಾಧ್ಯತೆಯಿದೆ.

ವೈದ್ಯಕೀಯ, ಔಷಧ ಕ್ಷೇತ್ರದ ಸಂಶೋಧನೆಗೆ ಅಡಿಪಾಯ: ಕೋವಿಡ್ ಸಾಂಕ್ರಾಮಿಕದ ಬಳಿಕ ವೈದ್ಯಕೀಯ ಮತ್ತು ಔಷಧ ಕ್ಷೇತ್ರಗಲ್ಲಿನ ಸಂಶೋಧನೆ ಮತ್ತು ಅನ್ವೇಷಣೆಯ ಮಹತ್ವವನ್ನು ಅರಿತಿರುವ ಸರ್ಕಾರ ಈ ರಂಗದಲ್ಲಿನ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದ ನಿರ್ವಹಣೆಯಲ್ಲಿನ ಖಾಸಗಿ, ಸರಕಾರಿ ಸಹಭಾಗಿತ್ವವನ್ನು ಸಂಶೋಧನ ವಲಯಕ್ಕೂ ಈ ಬಜೆಟ್ ಮೂಲಕ ವಿಸ್ತರಿಸಲಾಗಿದೆ.

andolanait

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

5 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

6 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

7 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

8 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

12 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

12 hours ago