ಶಿಕ್ಷಣ

ಕೇಂದ್ರ ಬಜೆಟ್‌ : ಕೊಡಗು, ಚಾ.ನಗರಕ್ಕೆ ನರ್ಸಿಂಗ್ ಕಾಲೇಜು

ರಾಜ್ಯಕ್ಕೆ ಧಕ್ಕಲಿರುವ ಒಂಬತ್ತು ನರ್ಸಿಂಗ್ ಕಾಲೇಜುಗಳು

ಮೈಸೂರು: ಬುಧವಾರ ಕೇಂದ್ರದ ಬಜೆಟ್‌ನಲ್ಲಿ ದೇಶದಾದ್ಯಂತ 156 ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಕುರಿತು ಆಗಿರುವ ಘೋಷಣೆ ಅನ್ವಯ ಕರ್ನಾಟಕಕ್ಕೆ ಚಾಮರಾಜನಗರ, ಕೊಡಗು ಸೇರಿದಂತೆ 9 ನರ್ಸಿಂಗ್ ಕಾಲೇಜುಗಳು ದೊರೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರತಿ ಜಿಲ್ಲೆಯಲ್ಲಿಯೂ ಒಂದು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸ್ಥಾಪನೆ ಆಗಬೇಕು ಎನ್ನುವ ನಿಲುವನ್ನು ಈಗಾಗಲೇ ಬಹಿರಂಗಪಡಿಸಿದ್ದು ಅದಕ್ಕೆ ತಕ್ಕಂತೆ ಸರ್ಕಾರ ಕಾರ್ಯಯೋಜನೆಯನ್ನು ರೂಪಿಸಿದೆ. ಇದರ ಮುಂದಿನ ಹಂತವಾಗಿ ನರ್ಸಿಂಗ್ ಕಾಲೇಜ್‌ಗಳ ಸ್ಥಾಪನೆಗೆ ಮುಂದಾಗಿದೆ. ತನ್ಮೂಲಕ ವೈದ್ಯಕೀಯ ಸೇವೆಯಲ್ಲಿ ನೈಪುಣ್ಯತೆಯನ್ನು ಕಾಪಾಡಿಕೊಳ್ಳುವ ಜತೆಗೆ ವೈದ್ಯರು ಮತ್ತು ದಾದಿಯರ ಸಂಖ್ಯೆಯನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸುವ ಪ್ರಯತ್ನಕ್ಕೆ ಸರ್ಕಾರ ಕೈಹಾಕಿದೆ.
2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾದ ಅನಂತರದಲ್ಲಿ ಸ್ಥಾಪನೆಯಾಗಿರುವ 175 ವೈದ್ಯಕೀಯ ಕಾಲೇಜ್‌ಗಳಲ್ಲಿ ಈ ನರ್ಸಿಂಗ್ ಕಾಲೇಜು ನಿರ್ಮಾಣವಾಗಲಿದೆ. ಈ ಮಾನದಂಡದ ಅನ್ವಯ ರಾಜ್ಯದಲ್ಲಿ 2014ರ ಬಳಿಕ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಕಲಬುರಗಿ, ಕಾರವಾರ, ಕೊಪ್ಪಳ, ಗದಗ ಮತ್ತು ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜ್ ಸ್ಥಾಪನೆಯಾಗಿದ್ದು ಇಲ್ಲಿ ನರ್ಸಿಂಗ್ ಕಾಲೇಜು ಕೂಡ ಬರುವ ಸಾಧ್ಯತೆಯಿದೆ.

ವೈದ್ಯಕೀಯ, ಔಷಧ ಕ್ಷೇತ್ರದ ಸಂಶೋಧನೆಗೆ ಅಡಿಪಾಯ: ಕೋವಿಡ್ ಸಾಂಕ್ರಾಮಿಕದ ಬಳಿಕ ವೈದ್ಯಕೀಯ ಮತ್ತು ಔಷಧ ಕ್ಷೇತ್ರಗಲ್ಲಿನ ಸಂಶೋಧನೆ ಮತ್ತು ಅನ್ವೇಷಣೆಯ ಮಹತ್ವವನ್ನು ಅರಿತಿರುವ ಸರ್ಕಾರ ಈ ರಂಗದಲ್ಲಿನ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದ ನಿರ್ವಹಣೆಯಲ್ಲಿನ ಖಾಸಗಿ, ಸರಕಾರಿ ಸಹಭಾಗಿತ್ವವನ್ನು ಸಂಶೋಧನ ವಲಯಕ್ಕೂ ಈ ಬಜೆಟ್ ಮೂಲಕ ವಿಸ್ತರಿಸಲಾಗಿದೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago