ಶಿಕ್ಷಣ

ಕೊಪ್ಪಳ ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ: ಹಾರೈಸಿ ಮರುಪತ್ರ ಬರೆದ ಸಿಎಂ

ಕೊಪ್ಪಳ: ಈಚೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಕೊಪ್ಪಳದ ವಿದ್ಯಾರ್ಥಿನಿ ತಮಗೆ ಬರೆದಿರುವ ಅಭಿನಂದನಾ ಪತ್ರ ಓದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪತ್ರದ ಮುಖೇನ ವ್ಯಕ್ತಪಡಿಸಿರುವ ವಿದ್ಯಾರ್ಥಿಯ ಸಾಮಾಜಿಕ ಕಾಳಜಿ ಕೊಂಡಾಡಿರುವ ಅವರು, ಮರಳಿ ವಿದ್ಯಾರ್ಥಿನಿಗೆ ಪತ್ರ ಬರೆದು ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ.

ನಗರದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿನಿ ಶ್ರೆಯಾಂಕ ವಿ.ಮೆಣಸಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆ ಈಚೆಗೆ ಅಭಿನಂದನಾ ಪತ್ರ ಬರೆದಿದ್ದಳು.

ಜನಪರ ಕಾರ್ಯ ಮುಂದುವರೆಸಿ: ಪತ್ರದ ಮುಖೇನ ವಿದ್ಯಾರ್ಥಿನಿ ಸಿದ್ದರಾಮಯ್ಯ 2013ರ ಅವಧಿಯಲ್ಲಿ ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳಾದ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಪ್ರಸ್ಥಾಪಿಸಿ, ಇದೇ ರೀತಿಯಾಗಿ ಈ ಬಾರಿಯೂ ಉತ್ತಮ ಆಡಳಿತ ನೀವು ನೀಡಬೇಕು ಎಂದು ಅಭಿಲಾಷೆ ವ್ಯಕ್ತಪಡಿಸಿದ್ದಳು.

ಸಾಮಾಜಿಕ ಕಳಕಳಿಯೊಂದಿಗೆ ಬರೆದಿರುವ ಈ ಪತ್ರವನ್ನು ಓದಿರುವ ಸಿದ್ದರಾಮಯ್ಯ, ಸಂತಸಗೊಂಡು ವಿದ್ಯಾರ್ಥಿನಿ ಶ್ರೇಯಾಂಕ ವಿ.ಮೆಣಸಗಿಗೆ ಮರಳಿ ಪತ್ರ ಬರೆದಿದ್ದಾರೆ. ಪ್ರೀತಿಯ ಶ್ರೇಯಾಂಕ, ತಾವು ಬರೆದ ಅಭಿನಂದನಾ ಪತ್ರ ತಲುಪಿದೆ. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು. ಈ ಎಳೆಯ ವಯಸ್ಸಿನಲ್ಲಿ ಬಡವರು, ದೀನ-ದಲಿತರು, ರೈತರ ಬಗೆಗಿನ ನಿನ್ನ ಕಾಳಜಿ ಬೆರಗು ಮೂಡಿಸುವಂತಹದ್ದು. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗು ಎಂದು ಹಾರೈಸಿ ಮರಳಿ ಪತ್ರ ಬರೆದಿದ್ದು, ಗಮನ ಸೆಳೆದಿದೆ.

ವಿದ್ಯಾರ್ಥಿನಿಯ ತಂದೆ ವಿಜಯಕುಮಾರ ನಗರದ ಪಿಎಲ್‌ಡಿ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿನಂದನಾ ಪತ್ರಕ್ಕೆ ಪ್ರತಿಕ್ರಿಯೆ ವ್ಯಕ್ತವಾಗಿ ಸಿಎಂ ಕಚೇರಿಯಿಂದ ಮರಳಿ ಪತ್ರ ಬಂದಿರುವುದಕ್ಕೆ ಮಾಸ್ತಿ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಹುಲಗಪ್ಪ ಕಟ್ಟಿಮನಿ, ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

andolanait

Share
Published by
andolanait

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

7 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

7 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

8 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

8 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

9 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

9 hours ago