ಶಿಕ್ಷಣ

ಕೊಪ್ಪಳ ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ: ಹಾರೈಸಿ ಮರುಪತ್ರ ಬರೆದ ಸಿಎಂ

ಕೊಪ್ಪಳ: ಈಚೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಕೊಪ್ಪಳದ ವಿದ್ಯಾರ್ಥಿನಿ ತಮಗೆ ಬರೆದಿರುವ ಅಭಿನಂದನಾ ಪತ್ರ ಓದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪತ್ರದ ಮುಖೇನ ವ್ಯಕ್ತಪಡಿಸಿರುವ ವಿದ್ಯಾರ್ಥಿಯ ಸಾಮಾಜಿಕ ಕಾಳಜಿ ಕೊಂಡಾಡಿರುವ ಅವರು, ಮರಳಿ ವಿದ್ಯಾರ್ಥಿನಿಗೆ ಪತ್ರ ಬರೆದು ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ.

ನಗರದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿನಿ ಶ್ರೆಯಾಂಕ ವಿ.ಮೆಣಸಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆ ಈಚೆಗೆ ಅಭಿನಂದನಾ ಪತ್ರ ಬರೆದಿದ್ದಳು.

ಜನಪರ ಕಾರ್ಯ ಮುಂದುವರೆಸಿ: ಪತ್ರದ ಮುಖೇನ ವಿದ್ಯಾರ್ಥಿನಿ ಸಿದ್ದರಾಮಯ್ಯ 2013ರ ಅವಧಿಯಲ್ಲಿ ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳಾದ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಪ್ರಸ್ಥಾಪಿಸಿ, ಇದೇ ರೀತಿಯಾಗಿ ಈ ಬಾರಿಯೂ ಉತ್ತಮ ಆಡಳಿತ ನೀವು ನೀಡಬೇಕು ಎಂದು ಅಭಿಲಾಷೆ ವ್ಯಕ್ತಪಡಿಸಿದ್ದಳು.

ಸಾಮಾಜಿಕ ಕಳಕಳಿಯೊಂದಿಗೆ ಬರೆದಿರುವ ಈ ಪತ್ರವನ್ನು ಓದಿರುವ ಸಿದ್ದರಾಮಯ್ಯ, ಸಂತಸಗೊಂಡು ವಿದ್ಯಾರ್ಥಿನಿ ಶ್ರೇಯಾಂಕ ವಿ.ಮೆಣಸಗಿಗೆ ಮರಳಿ ಪತ್ರ ಬರೆದಿದ್ದಾರೆ. ಪ್ರೀತಿಯ ಶ್ರೇಯಾಂಕ, ತಾವು ಬರೆದ ಅಭಿನಂದನಾ ಪತ್ರ ತಲುಪಿದೆ. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು. ಈ ಎಳೆಯ ವಯಸ್ಸಿನಲ್ಲಿ ಬಡವರು, ದೀನ-ದಲಿತರು, ರೈತರ ಬಗೆಗಿನ ನಿನ್ನ ಕಾಳಜಿ ಬೆರಗು ಮೂಡಿಸುವಂತಹದ್ದು. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗು ಎಂದು ಹಾರೈಸಿ ಮರಳಿ ಪತ್ರ ಬರೆದಿದ್ದು, ಗಮನ ಸೆಳೆದಿದೆ.

ವಿದ್ಯಾರ್ಥಿನಿಯ ತಂದೆ ವಿಜಯಕುಮಾರ ನಗರದ ಪಿಎಲ್‌ಡಿ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿನಂದನಾ ಪತ್ರಕ್ಕೆ ಪ್ರತಿಕ್ರಿಯೆ ವ್ಯಕ್ತವಾಗಿ ಸಿಎಂ ಕಚೇರಿಯಿಂದ ಮರಳಿ ಪತ್ರ ಬಂದಿರುವುದಕ್ಕೆ ಮಾಸ್ತಿ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಹುಲಗಪ್ಪ ಕಟ್ಟಿಮನಿ, ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

andolanait

Share
Published by
andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

50 mins ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

58 mins ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

2 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

3 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

4 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

4 hours ago