ಶಿಕ್ಷಣ

ಕೊಪ್ಪಳ ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ: ಹಾರೈಸಿ ಮರುಪತ್ರ ಬರೆದ ಸಿಎಂ

ಕೊಪ್ಪಳ: ಈಚೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಕೊಪ್ಪಳದ ವಿದ್ಯಾರ್ಥಿನಿ ತಮಗೆ ಬರೆದಿರುವ ಅಭಿನಂದನಾ ಪತ್ರ ಓದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪತ್ರದ ಮುಖೇನ ವ್ಯಕ್ತಪಡಿಸಿರುವ ವಿದ್ಯಾರ್ಥಿಯ ಸಾಮಾಜಿಕ ಕಾಳಜಿ ಕೊಂಡಾಡಿರುವ ಅವರು, ಮರಳಿ ವಿದ್ಯಾರ್ಥಿನಿಗೆ ಪತ್ರ ಬರೆದು ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ.

ನಗರದ ಮಾಸ್ತಿ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿನಿ ಶ್ರೆಯಾಂಕ ವಿ.ಮೆಣಸಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆ ಈಚೆಗೆ ಅಭಿನಂದನಾ ಪತ್ರ ಬರೆದಿದ್ದಳು.

ಜನಪರ ಕಾರ್ಯ ಮುಂದುವರೆಸಿ: ಪತ್ರದ ಮುಖೇನ ವಿದ್ಯಾರ್ಥಿನಿ ಸಿದ್ದರಾಮಯ್ಯ 2013ರ ಅವಧಿಯಲ್ಲಿ ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳಾದ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಪ್ರಸ್ಥಾಪಿಸಿ, ಇದೇ ರೀತಿಯಾಗಿ ಈ ಬಾರಿಯೂ ಉತ್ತಮ ಆಡಳಿತ ನೀವು ನೀಡಬೇಕು ಎಂದು ಅಭಿಲಾಷೆ ವ್ಯಕ್ತಪಡಿಸಿದ್ದಳು.

ಸಾಮಾಜಿಕ ಕಳಕಳಿಯೊಂದಿಗೆ ಬರೆದಿರುವ ಈ ಪತ್ರವನ್ನು ಓದಿರುವ ಸಿದ್ದರಾಮಯ್ಯ, ಸಂತಸಗೊಂಡು ವಿದ್ಯಾರ್ಥಿನಿ ಶ್ರೇಯಾಂಕ ವಿ.ಮೆಣಸಗಿಗೆ ಮರಳಿ ಪತ್ರ ಬರೆದಿದ್ದಾರೆ. ಪ್ರೀತಿಯ ಶ್ರೇಯಾಂಕ, ತಾವು ಬರೆದ ಅಭಿನಂದನಾ ಪತ್ರ ತಲುಪಿದೆ. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು. ಈ ಎಳೆಯ ವಯಸ್ಸಿನಲ್ಲಿ ಬಡವರು, ದೀನ-ದಲಿತರು, ರೈತರ ಬಗೆಗಿನ ನಿನ್ನ ಕಾಳಜಿ ಬೆರಗು ಮೂಡಿಸುವಂತಹದ್ದು. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗು ಎಂದು ಹಾರೈಸಿ ಮರಳಿ ಪತ್ರ ಬರೆದಿದ್ದು, ಗಮನ ಸೆಳೆದಿದೆ.

ವಿದ್ಯಾರ್ಥಿನಿಯ ತಂದೆ ವಿಜಯಕುಮಾರ ನಗರದ ಪಿಎಲ್‌ಡಿ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿನಂದನಾ ಪತ್ರಕ್ಕೆ ಪ್ರತಿಕ್ರಿಯೆ ವ್ಯಕ್ತವಾಗಿ ಸಿಎಂ ಕಚೇರಿಯಿಂದ ಮರಳಿ ಪತ್ರ ಬಂದಿರುವುದಕ್ಕೆ ಮಾಸ್ತಿ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಹುಲಗಪ್ಪ ಕಟ್ಟಿಮನಿ, ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

andolanait

Share
Published by
andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago