ಶಿಕ್ಷಣ

ಬೆಂಗಳೂರು ಬಳಿ ಶೈಕ್ಷಣಿಕ ನಗರ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು ಬಳಿ ಶೈಕ್ಷಣಿಕ ನಗರ(ಜ್ಞಾನಾಧಾರಿತ ನಗರ) ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ನವೀಕೃತ ಆವರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಬಳಿ 2000 ಎಕರೆ ಪ್ರದೇಶದಲ್ಲಿ ನಾಲೆಡ್ಜ್ ಸಿಟಿ ಮಾಡಲು ತೀರ್ಮಾನ ಮಾಡಲಾಗಿದೆ. ಅಲ್ಲಿ ಜಗತ್ತಿನ ಎಲ್ಲ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಬರುವಂತಾಗಬೇಕು. ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳು, ದೇಶ-ವಿದೇಶಗಳ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಸಂಶೋಧನೆ ಮಾಡಬಹುದು. ಹಾಗೆಯೇ ಅತ್ಯುತ್ತಮ ಶಿಕ್ಷಣವನ್ನು ಪಡೆಯಬಹುದು ಎಂದರು.

ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಆರು ವಿಶ್ವವಿದ್ಯಾಲಯಗಳು ಇವೆ. ಹೀಗಾಗಿ ಹೊಸ ಶೈಕ್ಷಣಿಕ ಜಿಲ್ಲೆಯನ್ನು ಪೋಷಣೆ ಮಾಡಲಾಗಿದ್ದು, ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ವಿದ್ಯಾರ್ಥಿಗಳು ತಮಿಗಿಷ್ಟವಿರುವ ವಿಷಯವನ್ನ ಅಭ್ಯಸಿಸಬಹುದು. ಬಹುಶಿಸ್ತೀಯ ವಿಷಯಗಳನ್ನು ಆಯ್ಕೆ ಮಾಡಲು ಆಕಾಶವಿದೆ ಎಂದು ತಿಳಿಸಿದರು.

ಈ ವಿಶ್ವ ವಿದ್ಯಾಲಯ ಅತ್ಯಂತ‌ಮಹತ್ವದ್ದಾಗಿದೆ.‌ ಈ ವಿಶ್ವ ವಿದ್ಯಾಲಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತಂದಿದ್ದೇವೆ. ಹೊಸ ಶಿಕ್ಷಣ ನೀತಿಯಿಂದ ಸಾಕಷ್ಟು ಅನುಕೂಲವಾಗಿದೆ. ರಾಷ್ಟ್ರೀಯ ಜಾರಿಗೆ ತಂದಿರುವ ಮೊದಲ ರಾಜ್ಯ ಕರ್ನಾಟಕ ಎಂದರು.

ಈ ಯೋಜನೆಗೆ ಯುವಕರಿಂದ ಸಾಕಷ್ಟು ಉತ್ಸಾಹ ಮೂಡಿದೆ. ಈಗ ಬದಲಾದ ಪದ್ದತಿಯಲ್ಲಿ ವಿದ್ಯಾರ್ಥಿಗಳು ಕಲೆಯಿಂದ ವಿಜ್ಞಾನ, ವಿಜ್ಞಾನದಿಂದ ವಾಣಿಜ್ಯ ಕಲಿಯಬಹುದು. ಇದೊಂದು ರೀತಿಯಲ್ಲಿ ಹೊಸ ಪ್ರಯೋಗ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ‌ ಮಾತನಾಡಿ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಇತಿಹಾಸವಿರುವ ಸಂಸ್ಥೆ ಇದು. ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಹಲವರು ಬಹಳ ದೊಡ್ಡ ಸಾಧನೆ ಮಾಡಿದ್ದಾರೆ. ಅಂತಹವರ ಸಾಲಿಗೆ ಇನ್ನಷ್ಟು ವಿದ್ಯಾರ್ಥಿಗಳು ಸೇರುವಂತಾಗಲಿ ಎಂದು ಆಶಿಸಿದರು‌. ಬೆಂಗಳೂರು ನಗರ ವಿಶ್ವ ವಿದ್ಯಾಲಯ ಅದ್ಭುತ ಸ್ಥಳದಲ್ಲಿದೆ. ವಿದ್ಯಾರ್ಥಿಗಳ ಸ್ನೇಹಿಯಾಗಿ ಶೈಕ್ಷಣಿಕ ಜಿಲ್ಲೆಯನ್ನಾಗಿ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಲಿಂಗರಾಜಗಾಂಧಿ, ಕುಲಸಚಿವ(ಆ) ಸಿ.ಎನ್.ಶ್ರೀಧರ, ಕುಲಸಚಿವ(ಮೌ) ಡಾ.ವಿ.ಲೋಕೇಶ, ವಿತ್ತಾಧಿಕಾರಿ ರಘು ಜಿ.ಪಿ. ಮತ್ತಿತರರು ಉಪಸ್ಥಿತರಿದ್ದರು.

andolanait

Share
Published by
andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

3 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

3 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

3 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

4 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

4 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

4 hours ago