ಶಿಕ್ಷಣ

ಬೆಂಗಳೂರು ಬಳಿ ಶೈಕ್ಷಣಿಕ ನಗರ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು ಬಳಿ ಶೈಕ್ಷಣಿಕ ನಗರ(ಜ್ಞಾನಾಧಾರಿತ ನಗರ) ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ನವೀಕೃತ ಆವರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಬಳಿ 2000 ಎಕರೆ ಪ್ರದೇಶದಲ್ಲಿ ನಾಲೆಡ್ಜ್ ಸಿಟಿ ಮಾಡಲು ತೀರ್ಮಾನ ಮಾಡಲಾಗಿದೆ. ಅಲ್ಲಿ ಜಗತ್ತಿನ ಎಲ್ಲ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಬರುವಂತಾಗಬೇಕು. ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳು, ದೇಶ-ವಿದೇಶಗಳ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಸಂಶೋಧನೆ ಮಾಡಬಹುದು. ಹಾಗೆಯೇ ಅತ್ಯುತ್ತಮ ಶಿಕ್ಷಣವನ್ನು ಪಡೆಯಬಹುದು ಎಂದರು.

ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಆರು ವಿಶ್ವವಿದ್ಯಾಲಯಗಳು ಇವೆ. ಹೀಗಾಗಿ ಹೊಸ ಶೈಕ್ಷಣಿಕ ಜಿಲ್ಲೆಯನ್ನು ಪೋಷಣೆ ಮಾಡಲಾಗಿದ್ದು, ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ವಿದ್ಯಾರ್ಥಿಗಳು ತಮಿಗಿಷ್ಟವಿರುವ ವಿಷಯವನ್ನ ಅಭ್ಯಸಿಸಬಹುದು. ಬಹುಶಿಸ್ತೀಯ ವಿಷಯಗಳನ್ನು ಆಯ್ಕೆ ಮಾಡಲು ಆಕಾಶವಿದೆ ಎಂದು ತಿಳಿಸಿದರು.

ಈ ವಿಶ್ವ ವಿದ್ಯಾಲಯ ಅತ್ಯಂತ‌ಮಹತ್ವದ್ದಾಗಿದೆ.‌ ಈ ವಿಶ್ವ ವಿದ್ಯಾಲಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತಂದಿದ್ದೇವೆ. ಹೊಸ ಶಿಕ್ಷಣ ನೀತಿಯಿಂದ ಸಾಕಷ್ಟು ಅನುಕೂಲವಾಗಿದೆ. ರಾಷ್ಟ್ರೀಯ ಜಾರಿಗೆ ತಂದಿರುವ ಮೊದಲ ರಾಜ್ಯ ಕರ್ನಾಟಕ ಎಂದರು.

ಈ ಯೋಜನೆಗೆ ಯುವಕರಿಂದ ಸಾಕಷ್ಟು ಉತ್ಸಾಹ ಮೂಡಿದೆ. ಈಗ ಬದಲಾದ ಪದ್ದತಿಯಲ್ಲಿ ವಿದ್ಯಾರ್ಥಿಗಳು ಕಲೆಯಿಂದ ವಿಜ್ಞಾನ, ವಿಜ್ಞಾನದಿಂದ ವಾಣಿಜ್ಯ ಕಲಿಯಬಹುದು. ಇದೊಂದು ರೀತಿಯಲ್ಲಿ ಹೊಸ ಪ್ರಯೋಗ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ‌ ಮಾತನಾಡಿ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಇತಿಹಾಸವಿರುವ ಸಂಸ್ಥೆ ಇದು. ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಹಲವರು ಬಹಳ ದೊಡ್ಡ ಸಾಧನೆ ಮಾಡಿದ್ದಾರೆ. ಅಂತಹವರ ಸಾಲಿಗೆ ಇನ್ನಷ್ಟು ವಿದ್ಯಾರ್ಥಿಗಳು ಸೇರುವಂತಾಗಲಿ ಎಂದು ಆಶಿಸಿದರು‌. ಬೆಂಗಳೂರು ನಗರ ವಿಶ್ವ ವಿದ್ಯಾಲಯ ಅದ್ಭುತ ಸ್ಥಳದಲ್ಲಿದೆ. ವಿದ್ಯಾರ್ಥಿಗಳ ಸ್ನೇಹಿಯಾಗಿ ಶೈಕ್ಷಣಿಕ ಜಿಲ್ಲೆಯನ್ನಾಗಿ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಲಿಂಗರಾಜಗಾಂಧಿ, ಕುಲಸಚಿವ(ಆ) ಸಿ.ಎನ್.ಶ್ರೀಧರ, ಕುಲಸಚಿವ(ಮೌ) ಡಾ.ವಿ.ಲೋಕೇಶ, ವಿತ್ತಾಧಿಕಾರಿ ರಘು ಜಿ.ಪಿ. ಮತ್ತಿತರರು ಉಪಸ್ಥಿತರಿದ್ದರು.

andolanait

Share
Published by
andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago