2021-22ನೇ ಸಾಲಿನಲ್ಲಿ ನೇಮಕಗೊಂಡವರ ಸೇವೆ ಸ್ಥಗಿತ
ಬೆಂಗಳೂರು: 2021-2022ನೇ ಶೈಕ್ಷಣಿಕ ಸಾಲಿಗೆ ನೇಮಕಗೊಂಡು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಡ್ಡಾಯವಾಗಿ ಸೇವೆಯಿಂದ ಬಿಡುಗಡೆಗೊಳಿಸುವಂತೆ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ಅವಧಿಗೆ ಅನುಗುಣವಾಗಿ ಗೌರವಧನವನ್ನು ಪಾವತಿಸಲು ನಿರ್ದೇಶಿಸಲಾಗಿದೆ. ಪ್ರಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಕಾರ್ಕ್ಕಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಜ.3ರ ಪ್ರಕಟಣೆಯಂತೆ ವುಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹಚ್ಚುವರಿ ಕಾರ್ಯಭಾರಕ್ಕುನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಈ ಸಂಬಂಧ ಆನ್ಲೈನ್ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ಅಭ್ಯರ್ಥಿಗಳು ವೇಳಾಪಟ್ಟಿಯನ್ವಯ ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಲಾಗಿದೆ.
ಅತಿಥಿ ಉಪನ್ಯಾಸಕರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಮೆರಿಟ್ ಪಟ್ಟಿ ಮತ್ತು ಕಾರ್ಯಭಾರ ಪ್ರಕಟಣೆಯನ್ನ ಫೆ3ರಂದು ಹೊರಡಿಸಲಾಗುತ್ತದೆ.
ಫೆ4ರಿಂದ ಫೆ.8ರವರೆಗೆ ಅಂತಿಮ ಮೆರಿಟ್ ಪಟ್ಟಿಯನ್ವಯ ವಿಷಯವಾರು ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಗಳು ನಡೆಯಲಿವೆ. ಫೆ.9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ಫೆ10ರಿಂದ ಕರ್ತವ್ಯಕ್ಕೆ ಆಯ್ಕೆಯಾದ ಅತಿಥಿ ಉಪನ್ಯಾಸಕರನ್ನು ವರದಿ ಮಾಡಿಕೊಳ್ಳಬಹುದಾಗಿದೆ.
ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಮಾಹಿತಿಯಲ್ಲಿ ವ್ಯತ್ಯಾಸಗಳಿದ್ದಲ್ಲಿ ಸದರಿ ವಿವರಗಳನ್ನು ಆನ್ಲೈನ್ ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಫೆ.2ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ನಂತರ ಆನ್ಲೈನ್ ಮೂಲಕವಾಗಲೀ ಅಥವಾ ಖುದ್ದಾಗಿ ಪತ್ರ ಮುಖೇನ ಸಲ್ಲಿಸುವ ಯಾವುದೇ ಮನವಿಯನ್ನು ಸಹ ಯಾವುದೇ ಕಾರಣಕ್ಕೂ ಪರಿಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…
ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಶಿವಕುಮಾರ್ ಕಿಡಿಕಾರಿದರು. ಈ…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ…