ಶಿಕ್ಷಣ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಕೌನ್ಸಿಲಿಂಗ್

2021-22ನೇ ಸಾಲಿನಲ್ಲಿ ನೇಮಕಗೊಂಡವರ ಸೇವೆ ಸ್ಥಗಿತ

ಬೆಂಗಳೂರು: 2021-2022ನೇ ಶೈಕ್ಷಣಿಕ ಸಾಲಿಗೆ ನೇಮಕಗೊಂಡು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಡ್ಡಾಯವಾಗಿ ಸೇವೆಯಿಂದ ಬಿಡುಗಡೆಗೊಳಿಸುವಂತೆ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ಅವಧಿಗೆ ಅನುಗುಣವಾಗಿ ಗೌರವಧನವನ್ನು ಪಾವತಿಸಲು ನಿರ್ದೇಶಿಸಲಾಗಿದೆ. ಪ್ರಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಕಾರ್ಕ್ಕಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಜ.3ರ ಪ್ರಕಟಣೆಯಂತೆ ವುಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹಚ್ಚುವರಿ ಕಾರ್ಯಭಾರಕ್ಕುನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಈ ಸಂಬಂಧ ಆನ್‌ಲೈನ್ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ಅಭ್ಯರ್ಥಿಗಳು ವೇಳಾಪಟ್ಟಿಯನ್ವಯ ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಲಾಗಿದೆ.
ಅತಿಥಿ ಉಪನ್ಯಾಸಕರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಮೆರಿಟ್ ಪಟ್ಟಿ ಮತ್ತು  ಕಾರ್ಯಭಾರ  ಪ್ರಕಟಣೆಯನ್ನ ಫೆ3ರಂದು ಹೊರಡಿಸಲಾಗುತ್ತದೆ.
ಫೆ4ರಿಂದ ಫೆ.8ರವರೆಗೆ ಅಂತಿಮ ಮೆರಿಟ್ ಪಟ್ಟಿಯನ್ವಯ ವಿಷಯವಾರು ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಗಳು ನಡೆಯಲಿವೆ. ಫೆ.9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ಫೆ10ರಿಂದ ಕರ್ತವ್ಯಕ್ಕೆ ಆಯ್ಕೆಯಾದ  ಅತಿಥಿ ಉಪನ್ಯಾಸಕರನ್ನು ವರದಿ ಮಾಡಿಕೊಳ್ಳಬಹುದಾಗಿದೆ.
ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಮಾಹಿತಿಯಲ್ಲಿ ವ್ಯತ್ಯಾಸಗಳಿದ್ದಲ್ಲಿ ಸದರಿ ವಿವರಗಳನ್ನು ಆನ್‌ಲೈನ್ ಅರ್ಜಿಯಲ್ಲಿ ತಿದ್ದುಪಡಿ  ಮಾಡಲು ಫೆ.2ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ನಂತರ ಆನ್‌ಲೈನ್ ಮೂಲಕವಾಗಲೀ ಅಥವಾ ಖುದ್ದಾಗಿ ಪತ್ರ ಮುಖೇನ ಸಲ್ಲಿಸುವ ಯಾವುದೇ ಮನವಿಯನ್ನು ಸಹ ಯಾವುದೇ ಕಾರಣಕ್ಕೂ ಪರಿಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

andolanait

Recent Posts

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

16 mins ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

31 mins ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

53 mins ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

59 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

1 hour ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

12 hours ago