2021-22ನೇ ಸಾಲಿನಲ್ಲಿ ನೇಮಕಗೊಂಡವರ ಸೇವೆ ಸ್ಥಗಿತ
ಬೆಂಗಳೂರು: 2021-2022ನೇ ಶೈಕ್ಷಣಿಕ ಸಾಲಿಗೆ ನೇಮಕಗೊಂಡು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಡ್ಡಾಯವಾಗಿ ಸೇವೆಯಿಂದ ಬಿಡುಗಡೆಗೊಳಿಸುವಂತೆ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ಅವಧಿಗೆ ಅನುಗುಣವಾಗಿ ಗೌರವಧನವನ್ನು ಪಾವತಿಸಲು ನಿರ್ದೇಶಿಸಲಾಗಿದೆ. ಪ್ರಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಕಾರ್ಕ್ಕಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಜ.3ರ ಪ್ರಕಟಣೆಯಂತೆ ವುಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹಚ್ಚುವರಿ ಕಾರ್ಯಭಾರಕ್ಕುನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಈ ಸಂಬಂಧ ಆನ್ಲೈನ್ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ಅಭ್ಯರ್ಥಿಗಳು ವೇಳಾಪಟ್ಟಿಯನ್ವಯ ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಲಾಗಿದೆ.
ಅತಿಥಿ ಉಪನ್ಯಾಸಕರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಮೆರಿಟ್ ಪಟ್ಟಿ ಮತ್ತು ಕಾರ್ಯಭಾರ ಪ್ರಕಟಣೆಯನ್ನ ಫೆ3ರಂದು ಹೊರಡಿಸಲಾಗುತ್ತದೆ.
ಫೆ4ರಿಂದ ಫೆ.8ರವರೆಗೆ ಅಂತಿಮ ಮೆರಿಟ್ ಪಟ್ಟಿಯನ್ವಯ ವಿಷಯವಾರು ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಗಳು ನಡೆಯಲಿವೆ. ಫೆ.9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ಫೆ10ರಿಂದ ಕರ್ತವ್ಯಕ್ಕೆ ಆಯ್ಕೆಯಾದ ಅತಿಥಿ ಉಪನ್ಯಾಸಕರನ್ನು ವರದಿ ಮಾಡಿಕೊಳ್ಳಬಹುದಾಗಿದೆ.
ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಮಾಹಿತಿಯಲ್ಲಿ ವ್ಯತ್ಯಾಸಗಳಿದ್ದಲ್ಲಿ ಸದರಿ ವಿವರಗಳನ್ನು ಆನ್ಲೈನ್ ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಫೆ.2ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ನಂತರ ಆನ್ಲೈನ್ ಮೂಲಕವಾಗಲೀ ಅಥವಾ ಖುದ್ದಾಗಿ ಪತ್ರ ಮುಖೇನ ಸಲ್ಲಿಸುವ ಯಾವುದೇ ಮನವಿಯನ್ನು ಸಹ ಯಾವುದೇ ಕಾರಣಕ್ಕೂ ಪರಿಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…