ಶಿಕ್ಷಣ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಕೌನ್ಸಿಲಿಂಗ್

2021-22ನೇ ಸಾಲಿನಲ್ಲಿ ನೇಮಕಗೊಂಡವರ ಸೇವೆ ಸ್ಥಗಿತ

ಬೆಂಗಳೂರು: 2021-2022ನೇ ಶೈಕ್ಷಣಿಕ ಸಾಲಿಗೆ ನೇಮಕಗೊಂಡು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಡ್ಡಾಯವಾಗಿ ಸೇವೆಯಿಂದ ಬಿಡುಗಡೆಗೊಳಿಸುವಂತೆ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ಅವಧಿಗೆ ಅನುಗುಣವಾಗಿ ಗೌರವಧನವನ್ನು ಪಾವತಿಸಲು ನಿರ್ದೇಶಿಸಲಾಗಿದೆ. ಪ್ರಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಕಾರ್ಕ್ಕಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಜ.3ರ ಪ್ರಕಟಣೆಯಂತೆ ವುಸ್ತುತ 2022-23ನೇ ಶೈಕ್ಷಣಿಕ ಸಾಲಿಗೆ ಹಚ್ಚುವರಿ ಕಾರ್ಯಭಾರಕ್ಕುನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಈ ಸಂಬಂಧ ಆನ್‌ಲೈನ್ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ಅಭ್ಯರ್ಥಿಗಳು ವೇಳಾಪಟ್ಟಿಯನ್ವಯ ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಲಾಗಿದೆ.
ಅತಿಥಿ ಉಪನ್ಯಾಸಕರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಮೆರಿಟ್ ಪಟ್ಟಿ ಮತ್ತು  ಕಾರ್ಯಭಾರ  ಪ್ರಕಟಣೆಯನ್ನ ಫೆ3ರಂದು ಹೊರಡಿಸಲಾಗುತ್ತದೆ.
ಫೆ4ರಿಂದ ಫೆ.8ರವರೆಗೆ ಅಂತಿಮ ಮೆರಿಟ್ ಪಟ್ಟಿಯನ್ವಯ ವಿಷಯವಾರು ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಗಳು ನಡೆಯಲಿವೆ. ಫೆ.9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ಫೆ10ರಿಂದ ಕರ್ತವ್ಯಕ್ಕೆ ಆಯ್ಕೆಯಾದ  ಅತಿಥಿ ಉಪನ್ಯಾಸಕರನ್ನು ವರದಿ ಮಾಡಿಕೊಳ್ಳಬಹುದಾಗಿದೆ.
ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಮಾಹಿತಿಯಲ್ಲಿ ವ್ಯತ್ಯಾಸಗಳಿದ್ದಲ್ಲಿ ಸದರಿ ವಿವರಗಳನ್ನು ಆನ್‌ಲೈನ್ ಅರ್ಜಿಯಲ್ಲಿ ತಿದ್ದುಪಡಿ  ಮಾಡಲು ಫೆ.2ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ನಂತರ ಆನ್‌ಲೈನ್ ಮೂಲಕವಾಗಲೀ ಅಥವಾ ಖುದ್ದಾಗಿ ಪತ್ರ ಮುಖೇನ ಸಲ್ಲಿಸುವ ಯಾವುದೇ ಮನವಿಯನ್ನು ಸಹ ಯಾವುದೇ ಕಾರಣಕ್ಕೂ ಪರಿಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

8 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

8 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

10 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

10 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

10 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

11 hours ago