ಶಿಕ್ಷಣ

4 ವರ್ಷ ಪದವಿ ಓದಿದವರು ಇನ್ಮುಂದೆ ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು!

3 ವರ್ಷದ ಪದವಿ ಕೋರ್ಸ್ ಸ್ಥಗಿತವಿಲ್ಲ: ಯುಜಿಸಿ

ಹೊಸದಿಲ್ಲಿ: ನಾಲ್ಕು ವರ್ಷದ ಪದವಿ ಓದುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು. ಇದಕ್ಕೆ ಸ್ನಾತಕೋತ್ತರ ಪದವಿ ಪೂರೈಸಬೇಕಾದ ಅಗತ್ಯವಿಲ್ಲ ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ(ಯುಜಿಸಿ) ಚೇರ್ಮನ್ ಜಗದೀಶ್ ಕುಮಾರ್ ಅವರು ಹೇಳಿದ್ದಾರೆ.
ಸದ್ಯ ೪ ವರ್ಷದ ಪದವಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ೩ ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ . ಮುಂದೆ ಮೂರು ವರ್ಷಗಳ ಆನರ್ಸ್ ಪದವಿ ಕಲಿಸಬೇಕಾ ಅಥವಾ ನಾಲ್ಕು ವರ್ಷಗಳ ಪದವಿ ನೀಡಬೇಕಾ ಎಂಬ ಕುರಿತು ವಿಶ್ವವಿದ್ಯಾಲಯಗಳೇ ನಿರ್ಧರಿಸಿಕೊಳ್ಳಬೇಕಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಈ ವಾರದ ಆರಂಭದಲ್ಲಿ ಘೋಷಿಸಲಾದ ಪದವಿ ಕೋರ್ಸ್‌ಗಳಿಗೆ ಹೊಸ ಪಠ್ಯಕ್ರಮದ ಚೌಕಟ್ಟಿನಲ್ಲಿ ಆನರ್ಸ್ ಪದವಿ ಕಾರ್ಯಕ್ರಮವನ್ನು ನಾಲ್ಕು ವರ್ಷಗಳ ಕಾರ್ಯಕ್ರಮಗಳು ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿಎಚ್‌ಡಿ ಮಾಡಲು ನೀಡಲಾದ ವಿಷಯಗಳಲ್ಲಿ ಆಳವಾದ ಜ್ಞಾನ ಪಡೆಯಲು ಒಂದು ಅಥವಾ ಎರಡು ವಿಷಯಗಳನ್ನು ಮೇಜರ್ ಆಗಿ ಪಡೆದುಕೊಳ್ಳಬಹುದು. ಬಹುಶಿಸ್ತೀಯ ಕೋರ್ಸ್‌ಗಳು, ಸಾಮರ್ಥ್ಯ ವರ್ಧನೆಯ ಕೋರ್ಸ್‌ಗಳು, ಕೌಶಲ್ಯ ವರ್ಧನೆಯ ಕೋರ್ಸ್‌ಗಳು, ಮೌಲ್ಯವರ್ಧಿತ ಕೋರ್ಸ್‌ಗಳು ಮತ್ತು ಇಂಟರ್ನ್‌ಶಿಪ್‌ಗಳು ನಾಲ್ಕು ವರ್ಷದ ಪದವಿ ಕೋರ್ಸುಗಳಲ್ಲಿ ಅಂತರ್ಗತವಾಗಿರುವುದರಿಂದ, ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಅಥವಾ ಉನ್ನತ ವ್ಯಾಸಂಗಕ್ಕೆ ಹೋಗಲು ಅವಕಾಶಗಳನ್ನು ಹೆಚ್ಚಿಸುತ್ತದೆ ಎಂದೂ ಅವರು ತಿಳಿಸಿದ್ದಾರೆ.
೩ ವರ್ಷದ ಪದವಿ ಸ್ಥಗಿತವಿಲ್ಲ
ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ಮೂರು ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಶ್ವವಿದ್ಯಾಲಯಗಳಿಗೆ ಮೂರು ಅಥವಾ ನಾಲ್ಕು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ. ನಾಲ್ಕು ವರ್ಷದ ಕೋರ್ಸ್‌ಗೆ ಸಂಬಂಧಿಸಿದಂತೆ ಹೊಸ ಪಠ್ಯಕ್ರಮದ ಚೌಕಟ್ಟನ್ನು ಸೋಮವಾರ

andolanait

Recent Posts

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

29 mins ago

ಬಿ.ಆರ್.ಟಿ ವಲಯದಲ್ಲಿ ಮತ್ತೆ ಕಾಡ್ಗಿಚ್ಚು : 20 ಎಕರೆ ಅರಣ್ಯ ನಾಶ

ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…

1 hour ago

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ; ಓರ್ವ ಸಾವು ಹಲವರಿಗೆ ಗಾಯ

ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.4ರಷ್ಟು…

1 hour ago

ಹನೂರು | ಕಾಡಾನೆದಾಳಿಗೆ 500ಕ್ಕೂ ಹೆಚ್ಚು ಬಾಳೆ ನಾಶ

ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…

2 hours ago

ಪರಿಶ್ರಮದಿಂದ ಮಾತ್ರ ಬದುಕು ರೂಪಿಸಿಕೊಳ್ಳಲು ಸಾಧ್ಯ : ಹೆಚ್ಚುವರಿ ಆಯುಕ್ತೆ ವೀಣಾ

ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…

2 hours ago

ಪ್ರೇಮಿಗಳ ಆತ್ಮಹತ್ಯೆ ; ಪೊನ್ನಾಚಿ ಗ್ರಾಮದಲ್ಲಿ ದುರಂತ

ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…

4 hours ago