ಶಿಕ್ಷಣ

4 ವರ್ಷ ಪದವಿ ಓದಿದವರು ಇನ್ಮುಂದೆ ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು!

3 ವರ್ಷದ ಪದವಿ ಕೋರ್ಸ್ ಸ್ಥಗಿತವಿಲ್ಲ: ಯುಜಿಸಿ

ಹೊಸದಿಲ್ಲಿ: ನಾಲ್ಕು ವರ್ಷದ ಪದವಿ ಓದುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು. ಇದಕ್ಕೆ ಸ್ನಾತಕೋತ್ತರ ಪದವಿ ಪೂರೈಸಬೇಕಾದ ಅಗತ್ಯವಿಲ್ಲ ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ(ಯುಜಿಸಿ) ಚೇರ್ಮನ್ ಜಗದೀಶ್ ಕುಮಾರ್ ಅವರು ಹೇಳಿದ್ದಾರೆ.
ಸದ್ಯ ೪ ವರ್ಷದ ಪದವಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ೩ ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ . ಮುಂದೆ ಮೂರು ವರ್ಷಗಳ ಆನರ್ಸ್ ಪದವಿ ಕಲಿಸಬೇಕಾ ಅಥವಾ ನಾಲ್ಕು ವರ್ಷಗಳ ಪದವಿ ನೀಡಬೇಕಾ ಎಂಬ ಕುರಿತು ವಿಶ್ವವಿದ್ಯಾಲಯಗಳೇ ನಿರ್ಧರಿಸಿಕೊಳ್ಳಬೇಕಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಈ ವಾರದ ಆರಂಭದಲ್ಲಿ ಘೋಷಿಸಲಾದ ಪದವಿ ಕೋರ್ಸ್‌ಗಳಿಗೆ ಹೊಸ ಪಠ್ಯಕ್ರಮದ ಚೌಕಟ್ಟಿನಲ್ಲಿ ಆನರ್ಸ್ ಪದವಿ ಕಾರ್ಯಕ್ರಮವನ್ನು ನಾಲ್ಕು ವರ್ಷಗಳ ಕಾರ್ಯಕ್ರಮಗಳು ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿಎಚ್‌ಡಿ ಮಾಡಲು ನೀಡಲಾದ ವಿಷಯಗಳಲ್ಲಿ ಆಳವಾದ ಜ್ಞಾನ ಪಡೆಯಲು ಒಂದು ಅಥವಾ ಎರಡು ವಿಷಯಗಳನ್ನು ಮೇಜರ್ ಆಗಿ ಪಡೆದುಕೊಳ್ಳಬಹುದು. ಬಹುಶಿಸ್ತೀಯ ಕೋರ್ಸ್‌ಗಳು, ಸಾಮರ್ಥ್ಯ ವರ್ಧನೆಯ ಕೋರ್ಸ್‌ಗಳು, ಕೌಶಲ್ಯ ವರ್ಧನೆಯ ಕೋರ್ಸ್‌ಗಳು, ಮೌಲ್ಯವರ್ಧಿತ ಕೋರ್ಸ್‌ಗಳು ಮತ್ತು ಇಂಟರ್ನ್‌ಶಿಪ್‌ಗಳು ನಾಲ್ಕು ವರ್ಷದ ಪದವಿ ಕೋರ್ಸುಗಳಲ್ಲಿ ಅಂತರ್ಗತವಾಗಿರುವುದರಿಂದ, ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಅಥವಾ ಉನ್ನತ ವ್ಯಾಸಂಗಕ್ಕೆ ಹೋಗಲು ಅವಕಾಶಗಳನ್ನು ಹೆಚ್ಚಿಸುತ್ತದೆ ಎಂದೂ ಅವರು ತಿಳಿಸಿದ್ದಾರೆ.
೩ ವರ್ಷದ ಪದವಿ ಸ್ಥಗಿತವಿಲ್ಲ
ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ಮೂರು ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಶ್ವವಿದ್ಯಾಲಯಗಳಿಗೆ ಮೂರು ಅಥವಾ ನಾಲ್ಕು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ. ನಾಲ್ಕು ವರ್ಷದ ಕೋರ್ಸ್‌ಗೆ ಸಂಬಂಧಿಸಿದಂತೆ ಹೊಸ ಪಠ್ಯಕ್ರಮದ ಚೌಕಟ್ಟನ್ನು ಸೋಮವಾರ

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

6 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

6 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

6 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

6 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

6 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

6 hours ago