ಶಿಕ್ಷಣ

4 ವರ್ಷ ಪದವಿ ಓದಿದವರು ಇನ್ಮುಂದೆ ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು!

3 ವರ್ಷದ ಪದವಿ ಕೋರ್ಸ್ ಸ್ಥಗಿತವಿಲ್ಲ: ಯುಜಿಸಿ

ಹೊಸದಿಲ್ಲಿ: ನಾಲ್ಕು ವರ್ಷದ ಪದವಿ ಓದುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು. ಇದಕ್ಕೆ ಸ್ನಾತಕೋತ್ತರ ಪದವಿ ಪೂರೈಸಬೇಕಾದ ಅಗತ್ಯವಿಲ್ಲ ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ(ಯುಜಿಸಿ) ಚೇರ್ಮನ್ ಜಗದೀಶ್ ಕುಮಾರ್ ಅವರು ಹೇಳಿದ್ದಾರೆ.
ಸದ್ಯ ೪ ವರ್ಷದ ಪದವಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ೩ ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ . ಮುಂದೆ ಮೂರು ವರ್ಷಗಳ ಆನರ್ಸ್ ಪದವಿ ಕಲಿಸಬೇಕಾ ಅಥವಾ ನಾಲ್ಕು ವರ್ಷಗಳ ಪದವಿ ನೀಡಬೇಕಾ ಎಂಬ ಕುರಿತು ವಿಶ್ವವಿದ್ಯಾಲಯಗಳೇ ನಿರ್ಧರಿಸಿಕೊಳ್ಳಬೇಕಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಈ ವಾರದ ಆರಂಭದಲ್ಲಿ ಘೋಷಿಸಲಾದ ಪದವಿ ಕೋರ್ಸ್‌ಗಳಿಗೆ ಹೊಸ ಪಠ್ಯಕ್ರಮದ ಚೌಕಟ್ಟಿನಲ್ಲಿ ಆನರ್ಸ್ ಪದವಿ ಕಾರ್ಯಕ್ರಮವನ್ನು ನಾಲ್ಕು ವರ್ಷಗಳ ಕಾರ್ಯಕ್ರಮಗಳು ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿಎಚ್‌ಡಿ ಮಾಡಲು ನೀಡಲಾದ ವಿಷಯಗಳಲ್ಲಿ ಆಳವಾದ ಜ್ಞಾನ ಪಡೆಯಲು ಒಂದು ಅಥವಾ ಎರಡು ವಿಷಯಗಳನ್ನು ಮೇಜರ್ ಆಗಿ ಪಡೆದುಕೊಳ್ಳಬಹುದು. ಬಹುಶಿಸ್ತೀಯ ಕೋರ್ಸ್‌ಗಳು, ಸಾಮರ್ಥ್ಯ ವರ್ಧನೆಯ ಕೋರ್ಸ್‌ಗಳು, ಕೌಶಲ್ಯ ವರ್ಧನೆಯ ಕೋರ್ಸ್‌ಗಳು, ಮೌಲ್ಯವರ್ಧಿತ ಕೋರ್ಸ್‌ಗಳು ಮತ್ತು ಇಂಟರ್ನ್‌ಶಿಪ್‌ಗಳು ನಾಲ್ಕು ವರ್ಷದ ಪದವಿ ಕೋರ್ಸುಗಳಲ್ಲಿ ಅಂತರ್ಗತವಾಗಿರುವುದರಿಂದ, ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಅಥವಾ ಉನ್ನತ ವ್ಯಾಸಂಗಕ್ಕೆ ಹೋಗಲು ಅವಕಾಶಗಳನ್ನು ಹೆಚ್ಚಿಸುತ್ತದೆ ಎಂದೂ ಅವರು ತಿಳಿಸಿದ್ದಾರೆ.
೩ ವರ್ಷದ ಪದವಿ ಸ್ಥಗಿತವಿಲ್ಲ
ನಾಲ್ಕು ವರ್ಷಗಳ ಪದವಿ ಕೋರ್ಸ್‌ಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವವರೆಗೆ ಮೂರು ವರ್ಷದ ಪದವಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಶ್ವವಿದ್ಯಾಲಯಗಳಿಗೆ ಮೂರು ಅಥವಾ ನಾಲ್ಕು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ. ನಾಲ್ಕು ವರ್ಷದ ಕೋರ್ಸ್‌ಗೆ ಸಂಬಂಧಿಸಿದಂತೆ ಹೊಸ ಪಠ್ಯಕ್ರಮದ ಚೌಕಟ್ಟನ್ನು ಸೋಮವಾರ

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

18 mins ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

60 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

1 hour ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 hours ago