ಬೆಂಗಳೂರು : ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ.
ಆದರೆ ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಹಾಗೂ ಚಿಕ್ಕಿ ನೀಡುತ್ತಿರುವುದು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್ ವಿಶಾಲ್ ಅವರು ಈ ಆದೇಶ ನೀಡಿದ್ದು, ಮಧ್ಯಾಹ್ನಊಟದ ಕುರಿತು ವಿವಿಧ ಮೂಲಗಳಿಂದ ಪ್ರತಿಕ್ರಿಯೆ ಸ್ವೀಕರಿಸಲಾಗಿದೆ. ಹೀಗಾಗಿ ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.
ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಶಾಲೆಗಳು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಕೆಲವು ನಿಯಮಗಳನ್ನು ಸ್ಪಷ್ಟಪಡಿಸಿದ್ದೇವೆಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆ ಕೇಳಿದರೆ ಮೊಟ್ಟೆಯನ್ನೇ ನೀಡಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಹಾಗೂ ಚಿಕ್ಕಿ ನೀಡಬೇಕೆಂದು ಹೇಳಿದ್ದಾರೆ.
ಮೊಟ್ಟೆ ವಿತರಣೆಗೆ ಆರ್ಥಿಕ ಕೊರತೆ ಕುರಿತು ಹಲವು ದೂರುಗಳು ಬಂದಿವೆ. ಮೊಟ್ಟೆಯ ಬೆಲೆ ಬದಲಾಗುತ್ತದೆ, ಮೊಟ್ಟೆ ದರ ಹೆಚ್ಚಳವಾಗಿದ್ದರೆ, ಸೂಕ್ತ ಕ್ರಮ ಕೈಗೊಂಡು ವಿತರಿಸಲು ಎಸ್ಡಿಎಂಸಿಗಳಿಗೆ ಸೂಚನೆ ನೀಡಲಾಗಿದೆ.
ಆದರೆ ಮೊಟ್ಟೆ ವಿತರಣೆ ಯೋಜನೆ ಸ್ಥಗಿತಗೊಳಿಸಬಾರದು. ಪ್ರಸ್ತುತ ಸನ್ನಿವೇಶದಲ್ಲಿ ದರ ಪರಿಷ್ಕರಣೆಗೆ ಅವಕಾಶವಿಲ್ಲದ ಕಾರಣ ಮೊಟ್ಟೆ ಖರೀದಿಯಲ್ಲಿ ದರ ಮೀರಿದ್ದರೆ, ತಗಲುವ ವೆಚ್ಚವನ್ನು ಹಿಂದಿನ ದಿನಗಳಲ್ಲಿ ದರ ಕಡಿಮೆ ಇದ್ದ ವೇಳೆ ಉಳಿದಿರುವ ಮೊತ್ತ ಅಥವಾ ಶಾಲಾ ಎಸ್ಡಿಎಂಸಿ ಸಮಿತಿಯ ಹಂತದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…