ಬೆಂಗಳೂರು : ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ.
ಆದರೆ ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಹಾಗೂ ಚಿಕ್ಕಿ ನೀಡುತ್ತಿರುವುದು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್ ವಿಶಾಲ್ ಅವರು ಈ ಆದೇಶ ನೀಡಿದ್ದು, ಮಧ್ಯಾಹ್ನಊಟದ ಕುರಿತು ವಿವಿಧ ಮೂಲಗಳಿಂದ ಪ್ರತಿಕ್ರಿಯೆ ಸ್ವೀಕರಿಸಲಾಗಿದೆ. ಹೀಗಾಗಿ ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.
ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಶಾಲೆಗಳು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಕೆಲವು ನಿಯಮಗಳನ್ನು ಸ್ಪಷ್ಟಪಡಿಸಿದ್ದೇವೆಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆ ಕೇಳಿದರೆ ಮೊಟ್ಟೆಯನ್ನೇ ನೀಡಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಹಾಗೂ ಚಿಕ್ಕಿ ನೀಡಬೇಕೆಂದು ಹೇಳಿದ್ದಾರೆ.
ಮೊಟ್ಟೆ ವಿತರಣೆಗೆ ಆರ್ಥಿಕ ಕೊರತೆ ಕುರಿತು ಹಲವು ದೂರುಗಳು ಬಂದಿವೆ. ಮೊಟ್ಟೆಯ ಬೆಲೆ ಬದಲಾಗುತ್ತದೆ, ಮೊಟ್ಟೆ ದರ ಹೆಚ್ಚಳವಾಗಿದ್ದರೆ, ಸೂಕ್ತ ಕ್ರಮ ಕೈಗೊಂಡು ವಿತರಿಸಲು ಎಸ್ಡಿಎಂಸಿಗಳಿಗೆ ಸೂಚನೆ ನೀಡಲಾಗಿದೆ.
ಆದರೆ ಮೊಟ್ಟೆ ವಿತರಣೆ ಯೋಜನೆ ಸ್ಥಗಿತಗೊಳಿಸಬಾರದು. ಪ್ರಸ್ತುತ ಸನ್ನಿವೇಶದಲ್ಲಿ ದರ ಪರಿಷ್ಕರಣೆಗೆ ಅವಕಾಶವಿಲ್ಲದ ಕಾರಣ ಮೊಟ್ಟೆ ಖರೀದಿಯಲ್ಲಿ ದರ ಮೀರಿದ್ದರೆ, ತಗಲುವ ವೆಚ್ಚವನ್ನು ಹಿಂದಿನ ದಿನಗಳಲ್ಲಿ ದರ ಕಡಿಮೆ ಇದ್ದ ವೇಳೆ ಉಳಿದಿರುವ ಮೊತ್ತ ಅಥವಾ ಶಾಲಾ ಎಸ್ಡಿಎಂಸಿ ಸಮಿತಿಯ ಹಂತದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…