ಶಿಕ್ಷಣ

ಸರ್ಕಾರಿ ಶಾಲಾ ದಾಖಲಾತಿ ಏರಿಕೆ ಖಾಸಗಿ ಇಳಿಕೆ.

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳ ಕಂಡುಬಂದಿದೆ. 1ರಿಂದ 10ನೇ ತರಗತಿವರೆಗೂ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಾರಂಭವಾಗಿ ಕೇವಲ 15 ದಿನದಲ್ಲೇ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜೂನ್ 15ರಿಂದ ಈವರೆಗೆ ಸರ್ಕಾರಿ ಶಾಲೆಗಳಿಗೆ 16 ಲಕ್ಷಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ

ಜೂನ್ 15ರಿಂದ ಈವರೆಗೆ ಒಟ್ಟು 16,52,613 ಮಕ್ಕಳು ಸರ್ಕಾರಿ ಶಾಲೆಗೆ ಸೇರಿಕೊಂಡಿದ್ದಾರೆ. ಅನುದಾನಿತ ಶಾಲೆಗಳಲ್ಲಿ 3,10,883 ಮಕ್ಕಳು ದಾಖಲಾಗಿದ್ದರೆ, ಖಾಸಗಿ ಶಾಲೆಗಳಲ್ಲಿ 4,48,699 ಮಕ್ಕಳು ಸೇರಿದ್ದಾರೆ. ಈ ವರ್ಷ ದಾಖಲಾತಿಗೆ ಮತ್ತಷ್ಟು ಸಮಯಾವಕಾಶ ನೀಡಿರುವುದರಿಂದ ಈ ಪ್ರಮಾಣವೂ ಮತ್ತಷ್ಟು ಹೆಚ್ಚಾಗಬಹುದಾದ ನಿರೀಕ್ಷೆಯಿದೆ.

ಕೊರೊನಾ ಕಾರಣದಿಂದ ಪೋಷಕರ ಆದಾಯ ಕಡಿಮೆಯಾಗಿದೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಶೇ 10ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಿ ಶಾಲೆಗಳ ಗುಣಮಟ್ಟವೂ ಇತ್ತೀಚೆಗೆ ಸುಧಾರಿಸಿದೆ. ರಾಜಕಾರಣಿಗಳೂ ಸೇರಿದಂತೆ ಹಲವರು ಸರ್ಕಾರಿ ಶಾಲೆಗಳನ್ನು ದತ್ತುಪಡೆಯುತ್ತಿದ್ದಾರೆ. ಇದರಿಂದ ಶಾಲೆಗಳ ಮೂಲಸೌಕರ್ಯವೂ ತಕ್ಕಮಟ್ಟಿಗೆ ಸುಧಾರಿಸಿದೆ. ಹೀಗಾಗಿ ಜನರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂಜರಿಯುತ್ತಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

andolana

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

4 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

4 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

4 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

7 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

7 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

7 hours ago