ಶಿಕ್ಷಣ

ಸರ್ಕಾರಿ ಶಾಲಾ ದಾಖಲಾತಿ ಏರಿಕೆ ಖಾಸಗಿ ಇಳಿಕೆ.

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳ ಕಂಡುಬಂದಿದೆ. 1ರಿಂದ 10ನೇ ತರಗತಿವರೆಗೂ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಾರಂಭವಾಗಿ ಕೇವಲ 15 ದಿನದಲ್ಲೇ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜೂನ್ 15ರಿಂದ ಈವರೆಗೆ ಸರ್ಕಾರಿ ಶಾಲೆಗಳಿಗೆ 16 ಲಕ್ಷಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ

ಜೂನ್ 15ರಿಂದ ಈವರೆಗೆ ಒಟ್ಟು 16,52,613 ಮಕ್ಕಳು ಸರ್ಕಾರಿ ಶಾಲೆಗೆ ಸೇರಿಕೊಂಡಿದ್ದಾರೆ. ಅನುದಾನಿತ ಶಾಲೆಗಳಲ್ಲಿ 3,10,883 ಮಕ್ಕಳು ದಾಖಲಾಗಿದ್ದರೆ, ಖಾಸಗಿ ಶಾಲೆಗಳಲ್ಲಿ 4,48,699 ಮಕ್ಕಳು ಸೇರಿದ್ದಾರೆ. ಈ ವರ್ಷ ದಾಖಲಾತಿಗೆ ಮತ್ತಷ್ಟು ಸಮಯಾವಕಾಶ ನೀಡಿರುವುದರಿಂದ ಈ ಪ್ರಮಾಣವೂ ಮತ್ತಷ್ಟು ಹೆಚ್ಚಾಗಬಹುದಾದ ನಿರೀಕ್ಷೆಯಿದೆ.

ಕೊರೊನಾ ಕಾರಣದಿಂದ ಪೋಷಕರ ಆದಾಯ ಕಡಿಮೆಯಾಗಿದೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಶೇ 10ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಿ ಶಾಲೆಗಳ ಗುಣಮಟ್ಟವೂ ಇತ್ತೀಚೆಗೆ ಸುಧಾರಿಸಿದೆ. ರಾಜಕಾರಣಿಗಳೂ ಸೇರಿದಂತೆ ಹಲವರು ಸರ್ಕಾರಿ ಶಾಲೆಗಳನ್ನು ದತ್ತುಪಡೆಯುತ್ತಿದ್ದಾರೆ. ಇದರಿಂದ ಶಾಲೆಗಳ ಮೂಲಸೌಕರ್ಯವೂ ತಕ್ಕಮಟ್ಟಿಗೆ ಸುಧಾರಿಸಿದೆ. ಹೀಗಾಗಿ ಜನರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂಜರಿಯುತ್ತಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

andolana

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

7 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

10 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

12 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

12 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

12 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

16 hours ago