ಶಿಕ್ಷಣ

ಭವಿಷ್ಯದ ಬಾಗಿಲು ತೆರೆಯುವುದು ಪದವಿಗಳಲ್ಲ, ಕೌಶಲ್ಯತೆ : ಡಾ. ಶರಣಪ್ರಕಾಶ್‌ ಪಾಟೀಲ್

ಕೊಚ್ಚಿ : ಬದುಕಿನಲ್ಲಿ ಯಶಸ್ಸು ಸಾಧಿಸಿಬೇಕಾದರೆ ನಿರಂತರ ಕಲಿಕೆ ಮುಖ್ಯ. ಇದರ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವೈಫಲ್ಯಕ್ಕೆ ಹೆದರಬಾರದು, ಕಲಿಕೆ ಮತ್ತು ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಶುಕ್ರವಾರ ಆಯೋಜಿಸಿದ್ದ ಜಾಗತಿಕ ಕೌಶಲ್ಯ ಶೃಂಗಸಭೆಯಲ್ಲಿ ಡಾ. ಪಾಟೀಲ್ ಭಾಷಣ ಮಾಡಿದರು.

ಪ್ರತಿಯೊಬ್ಬ ಉದ್ಯಮಿ, ಸಾಧಕ ಮತ್ತು ನಾಯಕ ಯಶಸ್ಸನ್ನು ಕಾಣುವ ಮೊದಲು ವೈಫಲ್ಯವನ್ನು ಕಂಡಿದ್ದಾರೆ. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದರು.

ವೈಫಲ್ಯ ಅಂತ್ಯವಲ್ಲ, ಯಶಸ್ಸಿನ ಮೆಟ್ಟಿಲು
“ವೈಫಲ್ಯವು ಅಂತ್ಯವಲ್ಲ – ಇದು ಯಶಸ್ಸಿನ ಮೆಟ್ಟಿಲು. ಸರ್ಕಾರಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳು ನೀತಿಗಳು ಮತ್ತು ವಿಧಾನಗಳನ್ನು ರೂಪಿಸುತ್ತದೆ, ಆದರೆ ನಿಜವಾದ ಬದಲಾವಣೆಯು, ವಿಭಿನ್ನವಾಗಿ ಕನಸು ಕಾಣುವ, ಮತ್ತು ಕಾರ್ಯನಿರ್ವಹಿಸುವ ಧೈರ್ಯವನ್ನು ಯುವ ಸಮೂಹ ಮೈಗೂಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಔಪಚಾರಿಕ ಪದವಿಗಳು ಭವಿಷ್ಯಕ್ಕೆ ದಾರಿ ತೋರುತ್ತವೆ. ಆದರೆ ನಿಜವಾದ ಯಶಸ್ಸಿನ ಬಾಗಿಲುಗಳನ್ನು ತೆರೆಯುವುದು ಕೌಶಲ್ಯತೆ. ಇದು ಆತ್ಮವಿಶ್ವಾಸ, ಘನತೆ ಮತ್ತು ಸ್ವಾತಂತ್ರ್ಯವನ್ನು ತುಂಬುತ್ತದೆ. ಅದನ್ನು ಉನ್ನತ ಶಿಕ್ಷಣದೊಂದಿಗೆ ಸಂಯೋಜಿಸಿದಾಗ, ಉದ್ಯೋಗಕ್ಕೆ ಅರ್ಹರಾಗುವುದಲ್ಲದೆ, ಇತರರಿಗೆ ಉದ್ಯೋಗಗಳನ್ನು ಸೃಷ್ಟಿಸುವ ವ್ಯಕ್ತಿಗಳನ್ನು ರೂಪಿಸಬಹುದು” ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಶಿಕ್ಷಣ ಕೇವಲ ಪರೀಕ್ಷಾ ತಯಾರಿಗೆ ಸೀಮಿತ ಆಗಬಾರದು
ಕೇರಳದ ಸಾಕ್ಷರತೆ ಮತ್ತು ಪ್ರಗತಿಪರ ಮನೋಭಾವ ಇಡೀ ದೇಶಕ್ಕೆ ಮಾದರಿ. ಶಿಕ್ಷಣವು ಕೇವಲ ಪರೀಕ್ಷಾ ತಯಾರಿಗೆ ಸೀಮಿತವಾಗಿರಬಾರದು. ಉದ್ಯೋಗದ ಭವಿಷ್ಯವನ್ನು ಪದವಿಗಳಿಂದ ವ್ಯಾಖ್ಯಾನಿಸಲಾಗುವುದಿಲ್ಲ, ಆದರೆ ಹೊಂದಿಕೊಳ್ಳುವಿಕೆ, ಸಮಸ್ಯೆ ಪರಿಹಾರ, ಸಹಯೋಗ ಮತ್ತು ನಾವೀನ್ಯತೆಯಿಂದ ಗುರುತಿಸಲಾಗುತ್ತದೆ. ಡಿಜಿಟಲ್ ತಂತ್ರಜ್ಞಾನಗಳು, ಯಾಂತ್ರೀಕತೆ, ಕೃತಕ ಬುದ್ಧಿಮತ್ತೆ ಮತ್ತು ಹೊಸ ವ್ಯವಹಾರ ಮಾದರಿಗಳೊಂದಿಗೆ ಕೌಶಲ್ಯಗಳು ಭವಿಷ್ಯದ ನಿಜವಾದ ಹೆಬ್ಬಾಗಿಲು ಆಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಜಾಗತಿಕ ಕೌಶಲ್ಯ ಶೃಂಗಸಭೆಯಲ್ಲಿ ಜಾಗತಿಕ ನಾಯಕರು, ನೀತಿ ನಿರೂಪಕರು, ಉದ್ಯಮ ನಾಯಕರು, ತರಬೇತಿ ಸಂಸ್ಥೆಗಳು, ಶೈಕ್ಷಣಿಕ ಅಧ್ಯಾಪಕರು, ಅಂತರರಾಷ್ಟ್ರೀಯ ಸಂಸ್ಥೆಗಳು, ನಾವೀನ್ಯಕಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 2,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಕೇರಳದ ಉನ್ನತ ಶಿಕ್ಷಣ ಸಚಿವರಾದ ಡಾ. ಆರ್. ಬಿಂದು, ಕೈಗಾರಿಕೆ ಸಚಿವ ಪಿ. ರಾಜೀವ್, ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ. ರಾಜೇಶ್ ಸೇರಿದಂತೆ ಹಲವು ಗಣ್ಯರು, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

10 hours ago