ಶಿಕ್ಷಣ

ಶೀಘ್ರವೇ SC,ST ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌!

ಹಣಕಾಸು ಇಲಾಖೆಗೆ 225 ಕೋಟಿ ರೂ. ಪ್ರಸ್ತಾವನೆ : ಡಾ.ಸಿಎನ್‌ಎ

ಬೆಳಗಾವಿ-ಹಣಕಾಸು ಇಲಾಖೆ ಅನುಮೋದನೆ ನೀಡಿದ ತಕ್ಷಣವೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ಅವಯಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಲ್ಯಾಪ್ ಟಾಪ್ ವಿತರಣೆಯು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡುವ ಕಾರ್ಯಕ್ರಮವಾಗಿದೆ. ನಾವು ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅಲ್ಲಿಂದ ಅನುಮೋದನೆ ಸಿಕ್ಕ ತಕ್ಷಣವೇ ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಲ್ಯಾಪ್‌ಟಾಪ್ ವಿತರಣೆಗಾಗಿ 225 ಕೋಟಿ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಲ್ಲಿ 80 ಕೋಟಿ ಅನುಮೋದನೆ ನೀಡಲಾಗಿದೆ. ಉಳಿದಿದ್ದನ್ನು ತ್ವರಿತವಾಗಿ ವಿತರಣೆ ಮಾಡುತ್ತೇವೆ ಎಂದರು.
ಏಳು ವಿಶ್ವವಿದ್ಯಾನಿಲಯಕ್ಕೆ ಲ್ಯಾಪ್ಟಾಪ್ ವಿತರಿಸಲು 1.45 ಕೋಟಿ ಹಣವನ್ನು ಕಳೆದ ವರ್ಷ ಬಿಡುಗಡೆ ಮಾಡಲಾಗಿತ್ತು. ಇದು ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮವಾಗಿದ್ದು, ನಾವು ನಮ್ಮ ಇಲಾಖೆಯಿಂದ ಪ್ರಸ್ತಾವನೆ ಸಿದ್ದಪಡಿಸಿ ಆರ್ಥಿಕ ಇಲಾಖೆಗೆ ಕಳುಹಿಸುತ್ತೇವೆ ಎಂದರು.

ತಡವರಿಸಿದ ಸಚಿವರು: ಇದಕ್ಕೂ ಮುನ್ನ ಸಚಿವ ಅಶ್ವಥ್ ನಾರಾಯಣ ಅವರು ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಲು ತಡವರಿಸಿದರು. ಒಂದು ಹಂತದಲ್ಲಿ ಲ್ಯಾಪ್ಟಾಪ್ ವಿತರಣೆಗೆ 1.45 ಕೋಟಿ ಹಣವನ್ನು ಮೀಸಲಿಡಲಾಗಿದೆ ಎಂದು ಹೇಳಿದಾಗ, ಸದಸ್ಯರಾದ ಪ್ರಿಯಾಂಕ ಖರ್ಗೆ, ಅಬ್ಬಯ್ಯ ಪ್ರಸಾದ್, ಶಿವಾನಂದ್ ಪಾಟೀಲ್ ಸೇರಿದಂತೆ ಮತ್ತಿತರರು ಆಕ್ಷೇಪ ವ್ಯಕ್ತಪಡಿಸಿದರು.
ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸಾವಿರಾರು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲು ಕೇವಲ 1.45 ಕೋಟಿ ಎಲ್ಲಿ ಸಾಕಾಗುತ್ತದೆ. ನಾವು ಪ್ರತಿಯೊಂದು ವಿಷಯಕ್ಕೂ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವುದು ಸರಿಯಲ್ಲ. ಸರಿಯಾದ ಮಾಹಿತಿ ನೀಡಲು ನಿರ್ದೇಶನ ನೀಡಬೇಕೆಂದು ಸಭಾಧ್ಯಕ್ಷರಿಗೆ ಮನವಿ ಮಾಡಿದರು.
ಆಗ ಸಭಾಧ್ಯಕ್ಷರಾದ ಕಾಗೇರಿ ಅವರು ಅಕಾರಿಗಳು ನೀಡಿರುವ ಮಾಹಿತಿಯನ್ನು ಸಚಿವರು ಸದನದಲ್ಲಿ ತಿಳಿಸಿದ್ದಾರೆ. ಹೆಚ್ಚು ಚರ್ಚೆ ಬೇಡ ಎಂದು ಹೇಳಿದರು.

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

5 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

8 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

8 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

8 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

8 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

8 hours ago