ಬೆಂಗಳೂರು : ಎಂಬಿಬಿಎಸ್ ಪುಸ್ತಕಗಳನ್ನು ಕನ್ನಡ ಭಾಷೆಗೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇಲಾಖೆಯು ಉನ್ನತ ಶಿಕ್ಷಣ ಇಲಾಖೆಯಿಂದ ಯಾವುದೇ ನಿರ್ದೇಶನ ಅಥವಾ ಸಲಹೆಗಳು ಬಂದಿಲ್ಲ ಎಂದು ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ ರಾಥೋಡ್
ಸ್ಪಷ್ಟಪಡಿಸಿದ್ದಾರೆ.
ಎಂಬಿಬಿಎಸ್ ಪುಸ್ತಕಗಳನ್ನು ಮಧ್ಯಪ್ರದೇಶ ಸರ್ಕಾರ ಹಿಂದಿಗೆ ಭಾಷೆಗೆ ಅನುವಾದಿಸಿದ್ದು, ಇದರ ಬೆನ್ನಲ್ಲೇ ಕನ್ನಡದಲ್ಲೂ ಪುಸ್ತಕಗಳ ಅನುವಾದಿಸುವ ಕುರಿತು ಮಾತುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಸ್ಪಷ್ಟನೆ ನೀಡಿದೆ.
ಪ್ರಸ್ತುತ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕೆಲ ವೈದ್ಯರು, ಸರ್ಕಾರವು ಇಂತಹ ಪ್ರಸ್ತಾವನೆಯನ್ನು ಪರಿಗಣಿಸಿದ್ದೇ ಆದರೆ, ವೈದ್ಯರು ತಮ್ಮ ಪ್ರದೇಶಗಳಿಗೆ ಸೀಮಿತರಾಗುವುದರಿಂದ ಮಹತ್ವಾಕಾಂಕ್ಷೆಗಳನ್ನು ಹೊಂದಿರುವ ವೈದ್ಯರಿಗೆ ಅವಕಾಶಗಳನ್ನು ಕಡಿಮೆ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಯು ವೈದ್ಯಕೀಯ ಕಲಿಯುವಾಗ ಅನೇಕ ಅಂಶಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಪ್ರತಿ ತಾಂತ್ರಿಕ ವಿವರಗಳನ್ನು ಭಾಷಾಂತರಿಸುವಾಗ ನಿಖರತೆ ಮಾಡುವುದು ಕಷ್ಟಕರವಾಗಿರುತ್ತದೆ ಎಂದಿದ್ದಾರೆ.
ವೈದ್ಯಕೀಯ ಪಠ್ಯಕ್ರಮವು ವಿಶಾಲವಾಗಿದ್ದು, ಇದು ಕಾಲ ಕ್ರಮೇಣ ವಿಶ್ವಾದ್ಯಂತ ಬದಲಾಗುತ್ತಿರುತ್ತದೆ. ಆದ್ದರಿಂದ ಸಾರ್ವತ್ರಿಕವಾಗಿ ಮಾತನಾಡುವ ಮತ್ತು ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಕೋರ್ಸ್ ಅನ್ನು ಅಧ್ಯಯನ ಮಾಡುವುದು.
ಪ್ರಸ್ತುತ ಹಿಂದಿ ಭಾಷಾಂತರಗಳು ಸಮಸ್ಯೆಗಳನ್ನು ಹೊಂದಿದ್ದು, ವೈದ್ಯಕೀಯ ಪದಗಳ ಪ್ರಮಾಣೀಕರಣವು ಅವರ ಪ್ರಾಥಮಿಕ ಕಾಳಜಿಯಾಗಿದೆ ಎಂದು ತಿಳಿಸಿದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…