ಬೆಂಗಳೂರು : ಎಂಬಿಬಿಎಸ್ ಪುಸ್ತಕಗಳನ್ನು ಕನ್ನಡ ಭಾಷೆಗೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇಲಾಖೆಯು ಉನ್ನತ ಶಿಕ್ಷಣ ಇಲಾಖೆಯಿಂದ ಯಾವುದೇ ನಿರ್ದೇಶನ ಅಥವಾ ಸಲಹೆಗಳು ಬಂದಿಲ್ಲ ಎಂದು ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ ರಾಥೋಡ್
ಸ್ಪಷ್ಟಪಡಿಸಿದ್ದಾರೆ.
ಎಂಬಿಬಿಎಸ್ ಪುಸ್ತಕಗಳನ್ನು ಮಧ್ಯಪ್ರದೇಶ ಸರ್ಕಾರ ಹಿಂದಿಗೆ ಭಾಷೆಗೆ ಅನುವಾದಿಸಿದ್ದು, ಇದರ ಬೆನ್ನಲ್ಲೇ ಕನ್ನಡದಲ್ಲೂ ಪುಸ್ತಕಗಳ ಅನುವಾದಿಸುವ ಕುರಿತು ಮಾತುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಸ್ಪಷ್ಟನೆ ನೀಡಿದೆ.
ಪ್ರಸ್ತುತ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕೆಲ ವೈದ್ಯರು, ಸರ್ಕಾರವು ಇಂತಹ ಪ್ರಸ್ತಾವನೆಯನ್ನು ಪರಿಗಣಿಸಿದ್ದೇ ಆದರೆ, ವೈದ್ಯರು ತಮ್ಮ ಪ್ರದೇಶಗಳಿಗೆ ಸೀಮಿತರಾಗುವುದರಿಂದ ಮಹತ್ವಾಕಾಂಕ್ಷೆಗಳನ್ನು ಹೊಂದಿರುವ ವೈದ್ಯರಿಗೆ ಅವಕಾಶಗಳನ್ನು ಕಡಿಮೆ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಯು ವೈದ್ಯಕೀಯ ಕಲಿಯುವಾಗ ಅನೇಕ ಅಂಶಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಪ್ರತಿ ತಾಂತ್ರಿಕ ವಿವರಗಳನ್ನು ಭಾಷಾಂತರಿಸುವಾಗ ನಿಖರತೆ ಮಾಡುವುದು ಕಷ್ಟಕರವಾಗಿರುತ್ತದೆ ಎಂದಿದ್ದಾರೆ.
ವೈದ್ಯಕೀಯ ಪಠ್ಯಕ್ರಮವು ವಿಶಾಲವಾಗಿದ್ದು, ಇದು ಕಾಲ ಕ್ರಮೇಣ ವಿಶ್ವಾದ್ಯಂತ ಬದಲಾಗುತ್ತಿರುತ್ತದೆ. ಆದ್ದರಿಂದ ಸಾರ್ವತ್ರಿಕವಾಗಿ ಮಾತನಾಡುವ ಮತ್ತು ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಕೋರ್ಸ್ ಅನ್ನು ಅಧ್ಯಯನ ಮಾಡುವುದು.
ಪ್ರಸ್ತುತ ಹಿಂದಿ ಭಾಷಾಂತರಗಳು ಸಮಸ್ಯೆಗಳನ್ನು ಹೊಂದಿದ್ದು, ವೈದ್ಯಕೀಯ ಪದಗಳ ಪ್ರಮಾಣೀಕರಣವು ಅವರ ಪ್ರಾಥಮಿಕ ಕಾಳಜಿಯಾಗಿದೆ ಎಂದು ತಿಳಿಸಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…