ಶಿಕ್ಷಣ

MBBS ಪುಸ್ತಕಗಳನ್ನು ಕನ್ನಡ ಭಾಷೆಗೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು : ಎಂಬಿಬಿಎಸ್ ಪುಸ್ತಕಗಳನ್ನು ಕನ್ನಡ ಭಾಷೆಗೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇಲಾಖೆಯು ಉನ್ನತ ಶಿಕ್ಷಣ ಇಲಾಖೆಯಿಂದ ಯಾವುದೇ ನಿರ್ದೇಶನ ಅಥವಾ ಸಲಹೆಗಳು ಬಂದಿಲ್ಲ ಎಂದು ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ ರಾಥೋಡ್
ಸ್ಪಷ್ಟಪಡಿಸಿದ್ದಾರೆ.

ಎಂಬಿಬಿಎಸ್ ಪುಸ್ತಕಗಳನ್ನು ಮಧ್ಯಪ್ರದೇಶ ಸರ್ಕಾರ ಹಿಂದಿಗೆ ಭಾಷೆಗೆ ಅನುವಾದಿಸಿದ್ದು, ಇದರ ಬೆನ್ನಲ್ಲೇ ಕನ್ನಡದಲ್ಲೂ ಪುಸ್ತಕಗಳ ಅನುವಾದಿಸುವ ಕುರಿತು ಮಾತುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಸ್ಪಷ್ಟನೆ ನೀಡಿದೆ.

ಪ್ರಸ್ತುತ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕೆಲ ವೈದ್ಯರು, ಸರ್ಕಾರವು ಇಂತಹ ಪ್ರಸ್ತಾವನೆಯನ್ನು ಪರಿಗಣಿಸಿದ್ದೇ ಆದರೆ, ವೈದ್ಯರು ತಮ್ಮ ಪ್ರದೇಶಗಳಿಗೆ ಸೀಮಿತರಾಗುವುದರಿಂದ ಮಹತ್ವಾಕಾಂಕ್ಷೆಗಳನ್ನು ಹೊಂದಿರುವ ವೈದ್ಯರಿಗೆ ಅವಕಾಶಗಳನ್ನು ಕಡಿಮೆ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಯು ವೈದ್ಯಕೀಯ ಕಲಿಯುವಾಗ ಅನೇಕ ಅಂಶಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಪ್ರತಿ ತಾಂತ್ರಿಕ ವಿವರಗಳನ್ನು ಭಾಷಾಂತರಿಸುವಾಗ ನಿಖರತೆ ಮಾಡುವುದು ಕಷ್ಟಕರವಾಗಿರುತ್ತದೆ ಎಂದಿದ್ದಾರೆ.
ವೈದ್ಯಕೀಯ ಪಠ್ಯಕ್ರಮವು ವಿಶಾಲವಾಗಿದ್ದು, ಇದು ಕಾಲ ಕ್ರಮೇಣ ವಿಶ್ವಾದ್ಯಂತ ಬದಲಾಗುತ್ತಿರುತ್ತದೆ. ಆದ್ದರಿಂದ ಸಾರ್ವತ್ರಿಕವಾಗಿ ಮಾತನಾಡುವ ಮತ್ತು ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಕೋರ್ಸ್ ಅನ್ನು ಅಧ್ಯಯನ ಮಾಡುವುದು.
ಪ್ರಸ್ತುತ ಹಿಂದಿ ಭಾಷಾಂತರಗಳು ಸಮಸ್ಯೆಗಳನ್ನು ಹೊಂದಿದ್ದು, ವೈದ್ಯಕೀಯ ಪದಗಳ ಪ್ರಮಾಣೀಕರಣವು ಅವರ ಪ್ರಾಥಮಿಕ ಕಾಳಜಿಯಾಗಿದೆ ಎಂದು ತಿಳಿಸಿದೆ.

andolanait

Share
Published by
andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

3 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

4 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

5 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago