ಶಿಕ್ಷಣ

ಉಪನ್ಯಾಸಕರಿಗೂ NPS ಪಿಂಚಣಿ : ಸಿಎಂ ಭರವಸೆ

ಬೆಂಗಳೂರು- ಕಾಲೇಜು ಶಿಕ್ಷಣ ಇಲಾಖೆಯ ಖಾಸಗಿ ಹಾಗೂ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರು, ಅರೆಕಾಲಿಕ ಉಪನ್ಯಾಸಕರಿಗೆ ಎನ್‍ಪಿಎಸ್ ಪಿಂಚಣಿ ಯೋಜನೆ ಜಾರಿಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ವಿಧಾನಪರಿಷತ್‍ನಲ್ಲಿ ಸದಸ್ಯ ಆಯನೂರು ಮಂಜುನಾಥ್ ಪ್ರಶ್ನೆ ಕೇಳಿ, ಅನುದಾನಿತ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಉಪನ್ಯಾಸಕರು ಎನ್‍ಪಿಎಸ್ ಸೌಲಭ್ಯಕ್ಕಾಗಿ 138 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ನಿನ್ನೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಅವರಿಗೆ ಪಿಂಚಣಿ ನೀಡುವ ಭರವಸೆ ನೀಡಲು ಕ್ರಮ ಕೈಗೊಳ್ಳಬೇಕು ಮತ್ತು ಮುಷ್ಕರ ನಿರತರ ಜತೆಗೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿದರು.
ಉತ್ತರ ನೀಡಿದ ಮುಖ್ಯಮಂತ್ರಿಯವರು, 2006ರ ಏಪ್ರಿಲ್ 1ರ ಪೂರ್ವದಲ್ಲಿ ನೇಮಕವಾದವರಿಗೆ ಹಳೆ ಪಿಂಚಣಿ ಯೋಜನೆ ಜಾರಿಯಾಗಿರುತ್ತದೆ. ಅನಂತರ ನೇಮಕವಾದವರಿಗೆ ಆಡಳಿತ ಮಂಡಳಿಯ ಪಾಲು ಶೇ.14ರಷ್ಟು, ಉಪನ್ಯಾಸಕರ ಪಾಲು ಶೇ.10ರಷ್ಟು ಸೇರಿಸಿ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ನಿಯಮ ಇದೆ. ಆದರೆ, ಇದು ಬಹಳಷ್ಟು ಕಡೆ ಇದು ಅನ್ವಯವಾಗಿಲ್ಲ. ಇನ್ನು ಮುಂದೆ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಆಡಳಿತ ಮಂಡಳಿ ತನ್ನ ಪಾಲಿನ ಹಣ ಭರ್ತಿ ಮಾಡುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಸದಸ್ಯ ಆಯನೂರು ಮಂಜುನಾಥ್ ಅನುಮಾನ ವ್ಯಕ್ತಪಡಿಸಿದಾಗ, ನಿಯಮದಲ್ಲಿ ಆಡಳಿತ ಮಂಡಳಿ ತನ್ನ ಪಾಲನ್ನು ಭರ್ತಿ ಮಾಡಬೇಕು ಎಂಬುದು ಸ್ಪಷ್ಟವಾಗಿದೆ. ಸರ್ಕಾರ ಇದಕ್ಕಾಗಿ ಸ್ಪಷ್ಟ ಸುತ್ತೋಲೆಯನ್ನೂ ಹೊರಡಿಸಲಿದೆ. 2005ರಲ್ಲಿ ನೇಮಕವಾಗಿ 2006ರಲ್ಲಿ ಸೇವೆಗೆ ಸೇರಿದವರಿಗೆ ಮತ್ತು 2006ರ ನಂತರ ಅನುದಾನಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ನಿಯಮಾನುಸಾರ ಪಿಂಚಣಿ ನೀಡುವ ಮೂಲಕ ಗೊಂದಲಗಳನ್ನು ಬಗೆಹರಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟನೆ ನೀಡಿದರು.
ಇದನ್ನು ಭರವಸೆ ಎಂದೇ ಭಾವಿಸಬಹುದೆ. ಮುಷ್ಕರ ಅಂತ್ಯಗೊಳಿಸಲು ಸಹಾಯಕವಾಗುವುದೇ ಎಂದು ಮಂಜುನಾಥ್ ಉಪ ಪ್ರಶ್ನೆ ಕೇಳಿದಾಗ, ನಾವು ನಮ್ಮ ಪಾಲಿನ ಭರವಸೆಗಳನ್ನು ನೀಡಿದ್ದೇವೆ. ಸದಸ್ಯರು ಮುಷ್ಕರ ನಿರತರೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರ ಮನವೊಲಿಸುವ ಪ್ರಯತ್ನ ಮಾಡಬೇಕಂದು ಸಿಎಂ ಸಲಹೆ ನೀಡಿದರು.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

5 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

6 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

6 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

6 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

7 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

7 hours ago