ಬೆಂಗಳೂರು- ಕಾಲೇಜು ಶಿಕ್ಷಣ ಇಲಾಖೆಯ ಖಾಸಗಿ ಹಾಗೂ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರು, ಅರೆಕಾಲಿಕ ಉಪನ್ಯಾಸಕರಿಗೆ ಎನ್ಪಿಎಸ್ ಪಿಂಚಣಿ ಯೋಜನೆ ಜಾರಿಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ವಿಧಾನಪರಿಷತ್ನಲ್ಲಿ ಸದಸ್ಯ ಆಯನೂರು ಮಂಜುನಾಥ್ ಪ್ರಶ್ನೆ ಕೇಳಿ, ಅನುದಾನಿತ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಉಪನ್ಯಾಸಕರು ಎನ್ಪಿಎಸ್ ಸೌಲಭ್ಯಕ್ಕಾಗಿ 138 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ನಿನ್ನೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಅವರಿಗೆ ಪಿಂಚಣಿ ನೀಡುವ ಭರವಸೆ ನೀಡಲು ಕ್ರಮ ಕೈಗೊಳ್ಳಬೇಕು ಮತ್ತು ಮುಷ್ಕರ ನಿರತರ ಜತೆಗೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿದರು.
ಉತ್ತರ ನೀಡಿದ ಮುಖ್ಯಮಂತ್ರಿಯವರು, 2006ರ ಏಪ್ರಿಲ್ 1ರ ಪೂರ್ವದಲ್ಲಿ ನೇಮಕವಾದವರಿಗೆ ಹಳೆ ಪಿಂಚಣಿ ಯೋಜನೆ ಜಾರಿಯಾಗಿರುತ್ತದೆ. ಅನಂತರ ನೇಮಕವಾದವರಿಗೆ ಆಡಳಿತ ಮಂಡಳಿಯ ಪಾಲು ಶೇ.14ರಷ್ಟು, ಉಪನ್ಯಾಸಕರ ಪಾಲು ಶೇ.10ರಷ್ಟು ಸೇರಿಸಿ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ನಿಯಮ ಇದೆ. ಆದರೆ, ಇದು ಬಹಳಷ್ಟು ಕಡೆ ಇದು ಅನ್ವಯವಾಗಿಲ್ಲ. ಇನ್ನು ಮುಂದೆ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಆಡಳಿತ ಮಂಡಳಿ ತನ್ನ ಪಾಲಿನ ಹಣ ಭರ್ತಿ ಮಾಡುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಸದಸ್ಯ ಆಯನೂರು ಮಂಜುನಾಥ್ ಅನುಮಾನ ವ್ಯಕ್ತಪಡಿಸಿದಾಗ, ನಿಯಮದಲ್ಲಿ ಆಡಳಿತ ಮಂಡಳಿ ತನ್ನ ಪಾಲನ್ನು ಭರ್ತಿ ಮಾಡಬೇಕು ಎಂಬುದು ಸ್ಪಷ್ಟವಾಗಿದೆ. ಸರ್ಕಾರ ಇದಕ್ಕಾಗಿ ಸ್ಪಷ್ಟ ಸುತ್ತೋಲೆಯನ್ನೂ ಹೊರಡಿಸಲಿದೆ. 2005ರಲ್ಲಿ ನೇಮಕವಾಗಿ 2006ರಲ್ಲಿ ಸೇವೆಗೆ ಸೇರಿದವರಿಗೆ ಮತ್ತು 2006ರ ನಂತರ ಅನುದಾನಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ನಿಯಮಾನುಸಾರ ಪಿಂಚಣಿ ನೀಡುವ ಮೂಲಕ ಗೊಂದಲಗಳನ್ನು ಬಗೆಹರಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟನೆ ನೀಡಿದರು.
ಇದನ್ನು ಭರವಸೆ ಎಂದೇ ಭಾವಿಸಬಹುದೆ. ಮುಷ್ಕರ ಅಂತ್ಯಗೊಳಿಸಲು ಸಹಾಯಕವಾಗುವುದೇ ಎಂದು ಮಂಜುನಾಥ್ ಉಪ ಪ್ರಶ್ನೆ ಕೇಳಿದಾಗ, ನಾವು ನಮ್ಮ ಪಾಲಿನ ಭರವಸೆಗಳನ್ನು ನೀಡಿದ್ದೇವೆ. ಸದಸ್ಯರು ಮುಷ್ಕರ ನಿರತರೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರ ಮನವೊಲಿಸುವ ಪ್ರಯತ್ನ ಮಾಡಬೇಕಂದು ಸಿಎಂ ಸಲಹೆ ನೀಡಿದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…