ಶಿಕ್ಷಣ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ: ತಾತ್ಕಾಲಿಕ ಪಟ್ಟಿ ಬಿಡುಗಡೆ

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದಂತಹ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ 1:2ರಂತೆ ದಾಖಲಾತಿಯ ಪರಿಶೀಲನೆಯನ್ನು ಕೂಡ ನಡೆಸಲಾಗಿತ್ತು. ಇದೀಗ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದ್ದು, ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಯನ್ನು ಗಮನದಲ್ಲಿಟ್ಟು ಕೆಲಸ ಮಾಡುತ್ತಿದೆ. ಅಲ್ಲದೇ ವಿದ್ಯಾರ್ಥಿಗಳು, ಶಿಕ್ಷಕರ ಸ್ನೇಹಿಯಾಗಿ ಭವಿಷ್ಯದ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನವೆಂವರ್‌ 14ರಂದು 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಶುಕ್ರವಾರ (ನವೆಂವರ್‌ 18) 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 15,000 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದರಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇಕಡಾ 1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆ ಆಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆ ಆಗಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

andolanait

Share
Published by
andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

12 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

12 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

14 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

14 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

14 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

22 hours ago