ಶಿಕ್ಷಣ

SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಗೆ ದಿನಾಂಕ ವಿಸ್ತರಣೆ

ಬೆಂಗಳೂರು: ಮುಂಬರುವ ಮಾರ್ಚ್​-ಎಪ್ರಿಲ್​ನಲ್ಲಿ ನಡೆಯಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಯ ದಿನಾಂಕವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.

​ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಗೆ ಸಂಬಂಧಿಸಿದಂತೆ ಉಲ್ಲೇಖಿತ-3ರ ಸುತ್ತೋಲೆಗಳನ್ವಯ ದಿನಾಂಕವನ್ನು ವಿಸ್ತರಿಸಲಾಗಿದ್ದರೂ ಸಹ, ದೂರವಾಣಿಯ ಮುಖಾಂತರ ಖುದ್ದಾಗಿ ಕೆಲವು ಅಭ್ಯರ್ಥಿಗಳು, ಪೋಷಕರು ಮತ್ತು ಮುಖ್ಯೋಪಾಧ್ಯಾಯರು ಪುನ: ಶಾಲಾ ದಿನಾಂಕವನ್ನು ವಿಸ್ತರಿಸಲು ಮಂಡಳಿಗೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಪರಿಶೀಲನೆ ನಡೆಸಿ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಕೊನೆಯ ದಿನಾಂಕ 2023 ರ ಜನವರಿ 5 ಆಗಿದೆ ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.ಅಂತಿಮ ದಿನಾಂಕದೊಳಗೆ ಎಲ್ಲಾ ಅರ್ಹ ಶಾಲಾ, ಖಾಸಗಿ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ನೋಂದಣಿ ಮತ್ತು ಪರೀಕ್ಷಾ ಶುಲ್ಕವನ್ನು ಪಾವತಿ ಮಾಡುವಂತೆ ತಮ್ಮ ಜಿಲ್ಲಾ ಅಥವಾ ತಾಲೂಕು ವ್ಯಾಪ್ತಿಗೆ ಬರುವ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸೂಚಿಸುವುದು. ಜಿಲ್ಲೆ ಅಥವಾ ತಾಲೂಕು ವ್ಯಾಪ್ತಿಯ ಸ್ಥಳೀಯ ದಿನಪತ್ರಿಕೆ ಮತ್ತು ಇತರ ಮಾಧ್ಯಮಗಳ ಮೂಲಕ ಈ ವಿಷಯದ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು, ಪೋಷಕರು ಮತ್ತು ವಿದ್ಯಾರ್ಥಿಗಳ ಗಮನಕ್ಕೆ ಬರುವಂತೆ ವ್ಯಾಪಕ ಪ್ರಚಾರವಾಗವಂತಹ ಅಗತ್ಯ ಕ್ರಮ ಕೈಗೊಳ್ಳುವುದು. ಅಲ್ಲದೇ ಮಾರ್ಚ್-2023ರ ತಿಂಗಳಲ್ಲಿ ಪರೀಕ್ಷೆಯು ಪ್ರಾರಂಭವಾಗುತ್ತಿದ್ದು, ಸಮಯದ ಕೊರತೆಯಿರುವ ಕಾರಣ ಪುನ: ನೋಂದಣಿ ಮತ್ತು ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆಗೆ ಅವಕಾಶ ಕಲ್ಪಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

andolanait

Share
Published by
andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ‘ಅರಸು, ಸಿದ್ದರಾಮಯ್ಯ ಎದುರಿಸಿದ ಸವಾಲುಗಳು ವಿಭಿನ್ನ’

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…

1 hour ago

ಕೇರಳ ಸರ್ಕಾರ ಭಾಷಾ ಸೌಹಾರ್ದತೆ ಕಾಪಾಡಲಿ

ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…

1 hour ago

ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆಯಲು ಹಿಂದೇಟು

ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ  ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…

1 hour ago

ಬಿಎಂಸಿಸಿ ರಚನೆ: ಅಭಿವೃದ್ಧಿಗೆ ಹಸಿರು ನಿಶಾನೆ

ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…

2 hours ago

137 ವರ್ಷ ದಾಟಿ ಮುನ್ನಡೆದ ಸರ್ಕಾರಿ ಶಾಲೆ!

ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…

2 hours ago

ಚಿಕ್ಕಣ್ಣ, ಜಯಪ್ರಕಾಶ್ ಬಿಜೆಪಿಗೆ?

ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…

2 hours ago