ಶಿಕ್ಷಣ

SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಗೆ ದಿನಾಂಕ ವಿಸ್ತರಣೆ

ಬೆಂಗಳೂರು: ಮುಂಬರುವ ಮಾರ್ಚ್​-ಎಪ್ರಿಲ್​ನಲ್ಲಿ ನಡೆಯಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಯ ದಿನಾಂಕವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.

​ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಗೆ ಸಂಬಂಧಿಸಿದಂತೆ ಉಲ್ಲೇಖಿತ-3ರ ಸುತ್ತೋಲೆಗಳನ್ವಯ ದಿನಾಂಕವನ್ನು ವಿಸ್ತರಿಸಲಾಗಿದ್ದರೂ ಸಹ, ದೂರವಾಣಿಯ ಮುಖಾಂತರ ಖುದ್ದಾಗಿ ಕೆಲವು ಅಭ್ಯರ್ಥಿಗಳು, ಪೋಷಕರು ಮತ್ತು ಮುಖ್ಯೋಪಾಧ್ಯಾಯರು ಪುನ: ಶಾಲಾ ದಿನಾಂಕವನ್ನು ವಿಸ್ತರಿಸಲು ಮಂಡಳಿಗೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಪರಿಶೀಲನೆ ನಡೆಸಿ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಕೊನೆಯ ದಿನಾಂಕ 2023 ರ ಜನವರಿ 5 ಆಗಿದೆ ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.ಅಂತಿಮ ದಿನಾಂಕದೊಳಗೆ ಎಲ್ಲಾ ಅರ್ಹ ಶಾಲಾ, ಖಾಸಗಿ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ನೋಂದಣಿ ಮತ್ತು ಪರೀಕ್ಷಾ ಶುಲ್ಕವನ್ನು ಪಾವತಿ ಮಾಡುವಂತೆ ತಮ್ಮ ಜಿಲ್ಲಾ ಅಥವಾ ತಾಲೂಕು ವ್ಯಾಪ್ತಿಗೆ ಬರುವ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸೂಚಿಸುವುದು. ಜಿಲ್ಲೆ ಅಥವಾ ತಾಲೂಕು ವ್ಯಾಪ್ತಿಯ ಸ್ಥಳೀಯ ದಿನಪತ್ರಿಕೆ ಮತ್ತು ಇತರ ಮಾಧ್ಯಮಗಳ ಮೂಲಕ ಈ ವಿಷಯದ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು, ಪೋಷಕರು ಮತ್ತು ವಿದ್ಯಾರ್ಥಿಗಳ ಗಮನಕ್ಕೆ ಬರುವಂತೆ ವ್ಯಾಪಕ ಪ್ರಚಾರವಾಗವಂತಹ ಅಗತ್ಯ ಕ್ರಮ ಕೈಗೊಳ್ಳುವುದು. ಅಲ್ಲದೇ ಮಾರ್ಚ್-2023ರ ತಿಂಗಳಲ್ಲಿ ಪರೀಕ್ಷೆಯು ಪ್ರಾರಂಭವಾಗುತ್ತಿದ್ದು, ಸಮಯದ ಕೊರತೆಯಿರುವ ಕಾರಣ ಪುನ: ನೋಂದಣಿ ಮತ್ತು ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆಗೆ ಅವಕಾಶ ಕಲ್ಪಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

andolanait

Share
Published by
andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

8 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

9 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

10 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

11 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

16 hours ago