ಶಿಕ್ಷಣ

SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಗೆ ದಿನಾಂಕ ವಿಸ್ತರಣೆ

ಬೆಂಗಳೂರು: ಮುಂಬರುವ ಮಾರ್ಚ್​-ಎಪ್ರಿಲ್​ನಲ್ಲಿ ನಡೆಯಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಯ ದಿನಾಂಕವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.

​ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಗೆ ಸಂಬಂಧಿಸಿದಂತೆ ಉಲ್ಲೇಖಿತ-3ರ ಸುತ್ತೋಲೆಗಳನ್ವಯ ದಿನಾಂಕವನ್ನು ವಿಸ್ತರಿಸಲಾಗಿದ್ದರೂ ಸಹ, ದೂರವಾಣಿಯ ಮುಖಾಂತರ ಖುದ್ದಾಗಿ ಕೆಲವು ಅಭ್ಯರ್ಥಿಗಳು, ಪೋಷಕರು ಮತ್ತು ಮುಖ್ಯೋಪಾಧ್ಯಾಯರು ಪುನ: ಶಾಲಾ ದಿನಾಂಕವನ್ನು ವಿಸ್ತರಿಸಲು ಮಂಡಳಿಗೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಪರಿಶೀಲನೆ ನಡೆಸಿ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಕೊನೆಯ ದಿನಾಂಕ 2023 ರ ಜನವರಿ 5 ಆಗಿದೆ ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.ಅಂತಿಮ ದಿನಾಂಕದೊಳಗೆ ಎಲ್ಲಾ ಅರ್ಹ ಶಾಲಾ, ಖಾಸಗಿ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ನೋಂದಣಿ ಮತ್ತು ಪರೀಕ್ಷಾ ಶುಲ್ಕವನ್ನು ಪಾವತಿ ಮಾಡುವಂತೆ ತಮ್ಮ ಜಿಲ್ಲಾ ಅಥವಾ ತಾಲೂಕು ವ್ಯಾಪ್ತಿಗೆ ಬರುವ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸೂಚಿಸುವುದು. ಜಿಲ್ಲೆ ಅಥವಾ ತಾಲೂಕು ವ್ಯಾಪ್ತಿಯ ಸ್ಥಳೀಯ ದಿನಪತ್ರಿಕೆ ಮತ್ತು ಇತರ ಮಾಧ್ಯಮಗಳ ಮೂಲಕ ಈ ವಿಷಯದ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು, ಪೋಷಕರು ಮತ್ತು ವಿದ್ಯಾರ್ಥಿಗಳ ಗಮನಕ್ಕೆ ಬರುವಂತೆ ವ್ಯಾಪಕ ಪ್ರಚಾರವಾಗವಂತಹ ಅಗತ್ಯ ಕ್ರಮ ಕೈಗೊಳ್ಳುವುದು. ಅಲ್ಲದೇ ಮಾರ್ಚ್-2023ರ ತಿಂಗಳಲ್ಲಿ ಪರೀಕ್ಷೆಯು ಪ್ರಾರಂಭವಾಗುತ್ತಿದ್ದು, ಸಮಯದ ಕೊರತೆಯಿರುವ ಕಾರಣ ಪುನ: ನೋಂದಣಿ ಮತ್ತು ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆಗೆ ಅವಕಾಶ ಕಲ್ಪಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

andolanait

Share
Published by
andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

6 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

6 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

6 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago