ಶಿಕ್ಷಣ

ಜನವರಿ 13ಕ್ಕೆ KSET ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ

ಜನವರಿ 13ರಂದು ನಡೆಯಲಿರುವ ಕೆ-ಸೆಟ್‌ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು http://kea.kar.nic.in ವೆಬ್‌ ತಾಣದಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌ ರಮ್ಯಾ ಬುಧವಾರ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಪ್ರವೇಶ ಪುತ್ರ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಪ್ರವೇಶ ಪತ್ರದಲ್ಲಿ ನಮೂದಿಸಿರುವ ಕೇಂದ್ರದಲ್ಲಿ ಮಾತ್ರ ಅಭ್ಯರ್ಥಿಗಳು ಹಾಜರಾಗಬೇಕು ಹಾಗೂ ಇತ್ತೀಚೆಗಿನ ಎರಡು ಭಾವಚಿತ್ರಗಳನ್ನು ತೆಗೆದುಕೊಂಡು ಬರಬೇಕು ಎಂದು ಹೇಳಲಾಗಿದೆ.

ಆ ದಿನ ಬೆಳಗ್ಗೆ 10ರಿಂದ 11 ಹಾಗೂ ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದ್ದು, ಇದರ ನಡುವೆ ಅಭ್ಯರ್ಥಿಗಳು ಹೊರ ಹೋಗಲು ಅವಕಾಶವಿಲ್ಲ ಎನ್ನಲಾಗಿದೆ. ಇನ್ನು ಅಭ್ಯರ್ಥಿಗಳು ಓಎಂಆರ್‌ ಶೀಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್‌ ಅಥವಾ ಕೇಂದ್ರದ ಕೋಡ್‌ ಅನ್ನು ತಪ್ಪಾಗಿ ಬರೆದರೆ ಅಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವುದಿಲ್ಲ ಎಂದು ತಿಳಿಸಲಾಗಿದೆ.

ವಸ್ತ್ರ ಸಂಹಿತೆ ಕಡ್ಡಾಯ: ಕೆ – ಸೆಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಪಾಲಿಸಬೇಕಿದೆ. ಯಾವುದೇ ಅಕ್ರಮ ನಡೆಯಬಾರದು ಎಂಬ ಕಾರಣದಿಂದ ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಇದರಂತೆ ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚು ಜೇಬುಗಳಿಲ್ಲದ ಸರಳ ಪ್ಯಾಂಟ್‌ ಧರಿಸುವುದು ಕಡ್ಡಾಯವಾಗಿದೆ. ಇದರ ಜತೆಗೆ ಜಿಪ್‌ ಪಾಕೆಟ್ಸ್‌, ದೊಡ್ಡ ಬಟನ್‌ ಮತ್ತು ವಿಸ್ತಾರವಾದ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ. ಅಲ್ಲದೇ ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಹಾಗೂ ಕಡಗಗಳನ್ನು ಧರಿಸಿಕೊಂಡು ಬರಬಾರದು ಎಂದು ತಿಳಿಸಲಾಗಿದೆ.

andolana

Share
Published by
andolana
Tags: examkset

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

47 mins ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

49 mins ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

52 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

54 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

1 hour ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

1 hour ago