ಶಿಕ್ಷಣ

ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯದ ಬೊಕ್ಕಸದಿಂದಲೇ ವಿದ್ಯಾರ್ಥಿ ವೇತನ : ಸಿಎಂ ಬೊಮ್ಮಾಯಿ

ಬೆಂಗಳೂರು : ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯದ ಬೊಕ್ಕಸದಿಂದಲೇ ವಿದ್ಯಾರ್ಥಿ ವೇತನ ನೀಡಲು ಮುಂದಿನ ವರ್ಷದಿಂದ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.
ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಸದಸ್ಯರಾದ ನಸೀರ್ ಅಹಮ್ಮದ್, ಕೆ.ಎ.ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಿಎಂ, ಕೇಂದ್ರ ಸರ್ಕಾರ ಕಡ್ಡಾಯ ಶಿಕ್ಷಣ ಕಾಯ್ದೆ ಅನುಸಾರ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ 7,61,418 ವಿದ್ಯಾರ್ಥಿಗಳು ಶಿಷ್ಯವೇತನದಿಂದ ವಂಚಿತರಾಗಿದ್ದಾರೆ. ಕೇಂದ್ರ ಸರ್ಕಾರ ಆದೇಶ ಹೊರಡಿಸುವ ಮುನ್ನವೇ ರಾಜ್ಯ ಸರ್ಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಜತೆಗೆ ತನ್ನ ಪಾಲಿನ 67 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಇದರಲ್ಲಿ ಈವರೆಗೂ1,34,510 ವಿದ್ಯಾರ್ಥಿಗಳಿಗೆ 63 ಕೋಟಿ ರೂ.ಗಳ ಶಿಷ್ಯ ವೇತನವನ್ನು ನೇರ ನಗದು ವರ್ಗಾವಣೆ ಮಾಡಲಾಗಿದೆ.
ಒಟ್ಟು 12.24 ಲಕ್ಷ ಅರ್ಜಿಗಳು ಸ್ವೀಕಾರವಾಗಿದ್ದವು, ಮುಂದಿನ ವರ್ಷ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವತಿಯಿಂದಲೇ ವಿದ್ಯಾರ್ಥಿ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

2 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

2 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

5 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

6 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

6 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

6 hours ago