ಬೆಂಗಳೂರು– ರಾಜ್ಯದ ನೆಲಜಲ, ಇತಿಹಾಸವನ್ನು ತಿಳಿಯುವ ಸದುದ್ದೇಶದಿಂದ ಹಿಂದಿನ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಮತ್ತೆ ಪ್ರಾರಂಭವಾಗಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ರದ್ದುಗೊಂಡಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಪ್ರಾರಂಭವಾಗಲಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮುಂದಿನ ತಿಂಗಳ ಅಂತ್ಯದೊಳಗೆ ಶಾಲಾ ಮಕ್ಕಳನ್ನು ಪ್ರೇಕ್ಷಣೀಯ ಸ್ಥಳಗಳಿಗೆ ಕರೆದೊಯ್ಯುವ ಶಾಲಾ ಪ್ರವಾಸ ಭಾಗ್ಯವನ್ನು ಪ್ರಾರಂಭಿಸಬೇಕು, ಜನವರಿ 1ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕೆಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
2022ರ ಡಿಸೆಂಬರ್ ಅಂತ್ಯದೊಳಗೆ ಮಕ್ಕಳನ್ನು ವಾರ್ಷಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಬೇಕು. ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಕುರಿತು ಅವರ ಪೋ
ಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್.ಆರ್ ಸೂಚಿಸಿದ್ದಾರೆ.
ಮಕ್ಕಳನ್ನು ಕರೆದೊಯ್ಯಲು ಶಾಲೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ವಾಹನಗಳನ್ನು ಬಾಡಿಗೆಗೆ ಪಡೆಯುವುದು ಕಡ್ಡಾಯವಾಗಿದೆ.
ಶಾಲಾ ಪ್ರವಾಸಗಳಿಗೆ ಖಾಸಗಿ ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲು ಶಾಲೆಗಳಿಗೆ ಅನುಮತಿ ಇರುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿನಿಯರ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರವಾಸದಲ್ಲಿ ಬಾಲಕಿಯರ ಮೇಲ್ವಿಚಾರಣೆಗೆ ಮಹಿಳಾ ಶಿಕ್ಷಕರನ್ನು ನಿಯೋಜಿಸಬೇಕೆಂದು ಶಾಲೆಗಳಿಗೆ ಸೂಚಿಸಿದೆ.
ಜೊತೆಗೆ ಪ್ರವಾಸದ ಸಂದರ್ಭದಲ್ಲಿ ಅಪಘಾತಗಳು ಅಥವಾ ಅಹಿತಕರ ಏನಾದರೂ ನಡೆದಲ್ಲಿ ಇಲಾಖೆ ಇಲ್ಲವೇ ಶಾಲಾ ಆಡಳಿತ ಮಂಡಳಿ ಜವಾಬ್ದಾರಿ ಆಗಿರುವುದಿಲ್ಲ ಎಂದು ಹೇಳಲಾಗಿದೆ.
ಮಕ್ಕಳಲ್ಲಿ ಕನಸುಗಳನ್ನು ಬಿತ್ತುವ ಮೂಲಕ ವಿದ್ಯಾವಂತ ಸಮಾಜ ನಿರ್ಮಾಣ ಭರವಸೆಯೊಂದಿಗೆ ಈ ಯೋಜನೆಗೆ ಕೇಂದ್ರ ಸರಕಾರ ಅನುನೋದನೆ ನೀಡಿದೆ.
ಎಲ್ಲೆಲ್ಲಿಗೆ ಪ್ರವಾಸ?
ಆಯಾ ಜಿಲ್ಲೆಗಳಲ್ಲಿನ ಪ್ರತಿಷ್ಠಿತ ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳಿಗೆ ಅಥವಾ ಇತರೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳನ್ನು ಪ್ರವಾಸ ಕರೆದೊಯ್ಯುವ ಕಾರ್ಯಕ್ರಮ ಇದಾಗಿದೆ.
ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಿಲ್ಲದಿದ್ದಲ್ಲಿ ನೆರೆಹೊರೆ ಜಿಲ್ಲೆಯ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವಾಸ ಕರೆದೊಯ್ಯಬಹುದು. ಪ್ರವಾಸದ ಸಂದರ್ಭದಲ್ಲಿ ಅಲ್ಲಿನ ತಜ್ಞರೊಂದಿಗೆ ಸಂವಾದ, ಉಪನ್ಯಾಸ, ಪ್ರಾಯೋಗಿಕ ತರಬೇತಿ ನೀಡುವ ಪ್ರಯೋಗಾಲಯ, ಕಾರ್ಯಾಲಯಗಳನ್ನು ಭೇಟಿ ಮಾಡಿಸಬೇಕು. ಮಕ್ಕಳು ತಮ್ಮ ಶೈಕ್ಷಣಿಕ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವಂತೆ ಮಾಹಿತಿ ಒದಗಿಸಬೇಕು.
ಪ್ರವಾಸದ ಸಮಯ:
ಇದೇ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕೊಂಡೊಯ್ಯಬೇಕಿದೆ. ಜತೆಗೆ ಪ್ರವಾಸದಿಂದ ಆದ ಲಾಭ ಮತ್ತು ಉತ್ತಮ ಅಂಶಗಳನ್ನು ವಿದ್ಯಾರ್ಥಿಗಳಿಂದ ಪಡೆದು ವರದಿ ಸಿದ್ಧಪಡಿಸಿ ಆರ್ಎಂಎಸ್ಎ ಕೇಂದ್ರ ಕಚೇರಿಗೆ ವರದಿ ಕಳುಹಿಸಬೇಕಿದೆ.
ಮಕ್ಕಳಲ್ಲಿ ಸಹಕಾರ, ಹೊಂದಾಣಿಕೆ, ನಾಯಕತ್ವ ಮನೋಭಾವ, ವೈಜÁ್ಞನಿಕ ಮನೋಭಾವ ಬೆಳೆಸಿಕೊಳ್ಳಲು ಪ್ರೇರಕವಾಗುವಂತೆ ಪ್ರವಾಸ ಏರ್ಪಡಿಸಬೇಕು. ತರಗತಿ ಕಲಿಕೆಗೆ ಪೂರಕವಾಗುವಂತೆ ಹಾಗೂ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಮತ್ತು ನೈಜ ಜೀವನದಲ್ಲಿ ಸ್ವಾವಲಂಬಿಯಾಗಲು ಅನುಕೂಲವಾಗುವಂತೆ ವಾತಾವರಣ ರೂಪಿಸಿ ಅಂತಹ ಬೋಧನೆಯನ್ನು ಪ್ರವಾಸದಲ್ಲಿ ನೀಡಬೇಕು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…