ಶಿಕ್ಷಣ

ಶಾಲಾ ಮಕ್ಕಳಿಗೆ ‘ಪ್ರವಾಸ ಭಾಗ್ಯ’ ಮತ್ತೆ ಪ್ರಾರಂಭ

ಬೆಂಗಳೂರು– ರಾಜ್ಯದ ನೆಲಜಲ, ಇತಿಹಾಸವನ್ನು ತಿಳಿಯುವ ಸದುದ್ದೇಶದಿಂದ ಹಿಂದಿನ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಮತ್ತೆ ಪ್ರಾರಂಭವಾಗಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ರದ್ದುಗೊಂಡಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಪ್ರಾರಂಭವಾಗಲಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮುಂದಿನ ತಿಂಗಳ ಅಂತ್ಯದೊಳಗೆ ಶಾಲಾ ಮಕ್ಕಳನ್ನು ಪ್ರೇಕ್ಷಣೀಯ ಸ್ಥಳಗಳಿಗೆ ಕರೆದೊಯ್ಯುವ ಶಾಲಾ ಪ್ರವಾಸ ಭಾಗ್ಯವನ್ನು ಪ್ರಾರಂಭಿಸಬೇಕು, ಜನವರಿ 1ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕೆಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
2022ರ ಡಿಸೆಂಬರ್ ಅಂತ್ಯದೊಳಗೆ ಮಕ್ಕಳನ್ನು ವಾರ್ಷಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಬೇಕು. ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಕುರಿತು ಅವರ ಪೋ
ಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್.ಆರ್ ಸೂಚಿಸಿದ್ದಾರೆ.
ಮಕ್ಕಳನ್ನು ಕರೆದೊಯ್ಯಲು ಶಾಲೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್‍ಟಿಸಿ) ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ವಾಹನಗಳನ್ನು ಬಾಡಿಗೆಗೆ ಪಡೆಯುವುದು ಕಡ್ಡಾಯವಾಗಿದೆ.
ಶಾಲಾ ಪ್ರವಾಸಗಳಿಗೆ ಖಾಸಗಿ ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲು ಶಾಲೆಗಳಿಗೆ ಅನುಮತಿ ಇರುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿನಿಯರ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರವಾಸದಲ್ಲಿ ಬಾಲಕಿಯರ ಮೇಲ್ವಿಚಾರಣೆಗೆ ಮಹಿಳಾ ಶಿಕ್ಷಕರನ್ನು ನಿಯೋಜಿಸಬೇಕೆಂದು ಶಾಲೆಗಳಿಗೆ ಸೂಚಿಸಿದೆ.
ಜೊತೆಗೆ ಪ್ರವಾಸದ ಸಂದರ್ಭದಲ್ಲಿ ಅಪಘಾತಗಳು ಅಥವಾ ಅಹಿತಕರ ಏನಾದರೂ ನಡೆದಲ್ಲಿ ಇಲಾಖೆ ಇಲ್ಲವೇ ಶಾಲಾ ಆಡಳಿತ ಮಂಡಳಿ ಜವಾಬ್ದಾರಿ ಆಗಿರುವುದಿಲ್ಲ ಎಂದು ಹೇಳಲಾಗಿದೆ.
ಮಕ್ಕಳಲ್ಲಿ ಕನಸುಗಳನ್ನು ಬಿತ್ತುವ ಮೂಲಕ ವಿದ್ಯಾವಂತ ಸಮಾಜ ನಿರ್ಮಾಣ ಭರವಸೆಯೊಂದಿಗೆ ಈ ಯೋಜನೆಗೆ ಕೇಂದ್ರ ಸರಕಾರ ಅನುನೋದನೆ ನೀಡಿದೆ.

ಎಲ್ಲೆಲ್ಲಿಗೆ ಪ್ರವಾಸ?
ಆಯಾ ಜಿಲ್ಲೆಗಳಲ್ಲಿನ ಪ್ರತಿಷ್ಠಿತ ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳಿಗೆ ಅಥವಾ ಇತರೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳನ್ನು ಪ್ರವಾಸ ಕರೆದೊಯ್ಯುವ ಕಾರ್ಯಕ್ರಮ ಇದಾಗಿದೆ.
ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಿಲ್ಲದಿದ್ದಲ್ಲಿ ನೆರೆಹೊರೆ ಜಿಲ್ಲೆಯ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವಾಸ ಕರೆದೊಯ್ಯಬಹುದು. ಪ್ರವಾಸದ ಸಂದರ್ಭದಲ್ಲಿ ಅಲ್ಲಿನ ತಜ್ಞರೊಂದಿಗೆ ಸಂವಾದ, ಉಪನ್ಯಾಸ, ಪ್ರಾಯೋಗಿಕ ತರಬೇತಿ ನೀಡುವ ಪ್ರಯೋಗಾಲಯ, ಕಾರ್ಯಾಲಯಗಳನ್ನು ಭೇಟಿ ಮಾಡಿಸಬೇಕು. ಮಕ್ಕಳು ತಮ್ಮ ಶೈಕ್ಷಣಿಕ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವಂತೆ ಮಾಹಿತಿ ಒದಗಿಸಬೇಕು.
ಪ್ರವಾಸದ ಸಮಯ:
ಇದೇ ನವೆಂಬರ್ ಮತ್ತು ಡಿಸೆಂಬರ್‍ನಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕೊಂಡೊಯ್ಯಬೇಕಿದೆ. ಜತೆಗೆ ಪ್ರವಾಸದಿಂದ ಆದ ಲಾಭ ಮತ್ತು ಉತ್ತಮ ಅಂಶಗಳನ್ನು ವಿದ್ಯಾರ್ಥಿಗಳಿಂದ ಪಡೆದು ವರದಿ ಸಿದ್ಧಪಡಿಸಿ ಆರ್‍ಎಂಎಸ್‍ಎ ಕೇಂದ್ರ ಕಚೇರಿಗೆ ವರದಿ ಕಳುಹಿಸಬೇಕಿದೆ.
ಮಕ್ಕಳಲ್ಲಿ ಸಹಕಾರ, ಹೊಂದಾಣಿಕೆ, ನಾಯಕತ್ವ ಮನೋಭಾವ, ವೈಜÁ್ಞನಿಕ ಮನೋಭಾವ ಬೆಳೆಸಿಕೊಳ್ಳಲು ಪ್ರೇರಕವಾಗುವಂತೆ ಪ್ರವಾಸ ಏರ್ಪಡಿಸಬೇಕು. ತರಗತಿ ಕಲಿಕೆಗೆ ಪೂರಕವಾಗುವಂತೆ ಹಾಗೂ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಮತ್ತು ನೈಜ ಜೀವನದಲ್ಲಿ ಸ್ವಾವಲಂಬಿಯಾಗಲು ಅನುಕೂಲವಾಗುವಂತೆ ವಾತಾವರಣ ರೂಪಿಸಿ ಅಂತಹ ಬೋಧನೆಯನ್ನು ಪ್ರವಾಸದಲ್ಲಿ ನೀಡಬೇಕು.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

17 hours ago