ಶಿಕ್ಷಣ

SSLC ಪೂರ್ವ ಸಿದ್ಧತಾ ಪರೀಕ್ಷೆ : ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ ತಯಾರಿ

* ಬಿಇಒ ಹಂತದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧ
* ಪ್ರತಿ ವಿದ್ಯಾಥಿಗಳಿಂದ 60 ರೂ. ಶುಲ್ಕ
* ಡಿಡಿಪಿಐ ನೇತೃತ್ವದಲ್ಲಿ ಪರೀಕ್ಷೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು ಮಟ್ಟದಲ್ಲಿ ತಯಾರಾಗಲಿದೆ. ಈವರೆಗೆ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಪ್ರಶ್ನೆ ಪತ್ರಿಕೆ ತಯಾರಿಯ ಜವಾಬ್ದಾರಿಯನ್ನು 2022-23ರ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ಈ ತಿಂಗಳು ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿ ಇನ್ನಷ್ಟೆ ಪ್ರಕಟಗೊಳ್ಳಬೇಕಿದೆ.
ಪೂರ್ವ ಸಿದ್ಧತಾ ಪರೀಕ್ಷೆಯನ್ನು ಬಿಇಒಗಳ ಹಂತದಲ್ಲೇ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಅನುಮೋದನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿಯಿಂದ ಮಾದರಿ ಪ್ರಶ್ನೆ ಪತ್ರಿಕೆಯನ್ನು ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಅಪ್‌ಲೋಡ್ ಮಾಡಲಾಗುವುದು. ಆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಅನುಸರಿಸಿ ಬಿಇಒಗಳು ತಮ್ಮ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಮುದ್ರಣ ಮಾಡಿ ತಾಲೂಕು ಹಂತದ ಸ್ಟ್ರಾಂಗ್ ರೂಂನಲ್ಲಿ ಗೌಪ್ಯತೆ ಮತ್ತು ಸುರಕ್ಷಿತವಾಗಿಡಬೇಕು. ಆಯಾ ವಿಷಯದ ಪರೀಕ್ಷಾ ದಿನದಂದು ಅವುಗಳನ್ನು ಬಿಗಿ ಭದ್ರತೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡಬೇಕು. ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪರೀಕ್ಷೆ ನಡೆಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.
ಪರೀಕ್ಷಾ ಶುಲ್ಕವಾಗಿ ಪ್ರತಿ ವಿದ್ಯಾರ್ಥಿಗಳಿಂದ 60 ರೂ.ಗಳನ್ನು ಮಾತ್ರ ಸಂಗ್ರಹಿಸಲು ಸೂಚಿಸಿದೆ. ಈ ಶುಲ್ಕವನ್ನು ಶಾಲಾ ಮುಖ್ಯೋಪಾಧ್ಯಾಯರು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಬಿಇಒಗಳು ಪರೀಕ್ಷಾ ಶುಲ್ಕ ಸ್ವೀಕರಿಸಿದ ಮತ್ತು ಪರೀಕ್ಷಾ ಖರ್ಚು ವೆಚ್ಚಗಳ ಕುರಿತು ಲೆಕ್ಕಪತ್ರ ನಿರ್ವಹಿಸಿ ತಪಾಸಣಾ ಸಮಯದಲ್ಲಿ ಹಾಜರುಪಡಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.

2018ಕ್ಕೆ ಮೊದಲು ಶಿಕ್ಷಕರ ಸಂಘದಿಂದ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿತ್ತು. ನಂತರ ಅದನ್ನು ಶಿಕ್ಷಕರ ಒತ್ತಾಯದ ಮೇರೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನೀಡಲು ಕ್ರಮ ಕೈಗೊಳ್ಳಲಾಗಿತ್ತು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

10 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

12 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

12 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

12 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

12 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

12 hours ago