ಶಿಕ್ಷಣ

SSLC ಪೂರ್ವ ಸಿದ್ಧತಾ ಪರೀಕ್ಷೆ : ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ ತಯಾರಿ

* ಬಿಇಒ ಹಂತದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧ
* ಪ್ರತಿ ವಿದ್ಯಾಥಿಗಳಿಂದ 60 ರೂ. ಶುಲ್ಕ
* ಡಿಡಿಪಿಐ ನೇತೃತ್ವದಲ್ಲಿ ಪರೀಕ್ಷೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು ಮಟ್ಟದಲ್ಲಿ ತಯಾರಾಗಲಿದೆ. ಈವರೆಗೆ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಪ್ರಶ್ನೆ ಪತ್ರಿಕೆ ತಯಾರಿಯ ಜವಾಬ್ದಾರಿಯನ್ನು 2022-23ರ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ಈ ತಿಂಗಳು ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿ ಇನ್ನಷ್ಟೆ ಪ್ರಕಟಗೊಳ್ಳಬೇಕಿದೆ.
ಪೂರ್ವ ಸಿದ್ಧತಾ ಪರೀಕ್ಷೆಯನ್ನು ಬಿಇಒಗಳ ಹಂತದಲ್ಲೇ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಅನುಮೋದನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿಯಿಂದ ಮಾದರಿ ಪ್ರಶ್ನೆ ಪತ್ರಿಕೆಯನ್ನು ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಅಪ್‌ಲೋಡ್ ಮಾಡಲಾಗುವುದು. ಆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಅನುಸರಿಸಿ ಬಿಇಒಗಳು ತಮ್ಮ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಮುದ್ರಣ ಮಾಡಿ ತಾಲೂಕು ಹಂತದ ಸ್ಟ್ರಾಂಗ್ ರೂಂನಲ್ಲಿ ಗೌಪ್ಯತೆ ಮತ್ತು ಸುರಕ್ಷಿತವಾಗಿಡಬೇಕು. ಆಯಾ ವಿಷಯದ ಪರೀಕ್ಷಾ ದಿನದಂದು ಅವುಗಳನ್ನು ಬಿಗಿ ಭದ್ರತೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡಬೇಕು. ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪರೀಕ್ಷೆ ನಡೆಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.
ಪರೀಕ್ಷಾ ಶುಲ್ಕವಾಗಿ ಪ್ರತಿ ವಿದ್ಯಾರ್ಥಿಗಳಿಂದ 60 ರೂ.ಗಳನ್ನು ಮಾತ್ರ ಸಂಗ್ರಹಿಸಲು ಸೂಚಿಸಿದೆ. ಈ ಶುಲ್ಕವನ್ನು ಶಾಲಾ ಮುಖ್ಯೋಪಾಧ್ಯಾಯರು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಬಿಇಒಗಳು ಪರೀಕ್ಷಾ ಶುಲ್ಕ ಸ್ವೀಕರಿಸಿದ ಮತ್ತು ಪರೀಕ್ಷಾ ಖರ್ಚು ವೆಚ್ಚಗಳ ಕುರಿತು ಲೆಕ್ಕಪತ್ರ ನಿರ್ವಹಿಸಿ ತಪಾಸಣಾ ಸಮಯದಲ್ಲಿ ಹಾಜರುಪಡಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.

2018ಕ್ಕೆ ಮೊದಲು ಶಿಕ್ಷಕರ ಸಂಘದಿಂದ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿತ್ತು. ನಂತರ ಅದನ್ನು ಶಿಕ್ಷಕರ ಒತ್ತಾಯದ ಮೇರೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನೀಡಲು ಕ್ರಮ ಕೈಗೊಳ್ಳಲಾಗಿತ್ತು.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

25 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

30 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

39 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago