ಶಿಕ್ಷಣ

ಎಸ್ಎಸ್ಎಲ್ ಸಿ ಫಲಿತಾಂಶ: ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗಿದೆ ಅವಕಾಶ

ಬೆಂಗಳೂರು: ರಾಜ್ಯದ ಈ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ.

ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯು (ಶೇ.96.8) ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲೆ ಎರಡನೇ ಸ್ಥಾನ (96.74) ಪಡೆದು ಕೊಂಡಿದ್ದು, ಮೂರನೇ ಸ್ಥಾನ ಹಾಸನ ಜಿಲ್ಲೆ (96.68) ಪಡೆದಿದೆ.

ಈ ಬಾರಿ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 59,246 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಉತ್ತೀರ್ಣರಾಗಿದ್ದಾರೆ.

ನಾಲ್ಕು ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಭೂಮಿಕಾ ಪೈ, ನ್ಯೂ ಮೆಕಾಲೆ ಸ್ಕೂಲ್, ಹೊಸೂರು ರಸ್ತೆ, ಬೆಂಗಳೂರು. ಯಶಸ್ ಗೌಡ, ಬಾಲಗಂಗಾಧರನಾಥ ಸ್ವಾಮೀಜಿ ಶಾಲೆ, ಚಿಕ್ಕಬಳ್ಳಾಪುರ. ಅನುಪಮ ಶೈಲೇಶ್, ಕುಮಾರೇಶ್ವರ ಹೈ ಸ್ಕೂಲ್, ಸವದತ್ತಿ. ಭೀಮನಗೌಡ ಹನುಮಂತಗೌಡ ಬಿರಾದಾರ ಪಾಟೀಲ, ಆಕ್ಸ್‌ಫರ್ಡ್ ಸ್ಕೂಲ್, ಮುದ್ದೇಬಿಹಾಳ ವಿಜಯಪುರ ರ್ಯಾಂಕ್ ಪಡೆದವರು.

ಗಮನಿಸಿ

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಫೋಟೋಕಾಪಿ ಪಡೆಯಲು ಮೇ. 08 ರಿಂದ ಮೇ.14ರವರೆಗೆ ಅವಕಾಶವಿದೆ. ಮರು ಮೌಲ್ಯ ಮಾಪನ ಮಾಡಲು ಮೇ.15 ರಿಂದ ಮೇ.21 ರವರೆಗೆ ಅವಕಾಶವಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ.08 ರಿಂದ ಮೇ. 15 ರವರೆಗೆ ಅವಕಾಶ ನೀಡಲಾಗಿದೆ.

andolanait

Share
Published by
andolanait

Recent Posts

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

47 mins ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

53 mins ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

1 hour ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

1 hour ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

1 hour ago

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

2 hours ago