ಶಿಕ್ಷಣ

ಎಸ್ಎಸ್ಎಲ್ ಸಿ ಫಲಿತಾಂಶ: ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗಿದೆ ಅವಕಾಶ

ಬೆಂಗಳೂರು: ರಾಜ್ಯದ ಈ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ.

ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯು (ಶೇ.96.8) ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲೆ ಎರಡನೇ ಸ್ಥಾನ (96.74) ಪಡೆದು ಕೊಂಡಿದ್ದು, ಮೂರನೇ ಸ್ಥಾನ ಹಾಸನ ಜಿಲ್ಲೆ (96.68) ಪಡೆದಿದೆ.

ಈ ಬಾರಿ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 59,246 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಉತ್ತೀರ್ಣರಾಗಿದ್ದಾರೆ.

ನಾಲ್ಕು ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಭೂಮಿಕಾ ಪೈ, ನ್ಯೂ ಮೆಕಾಲೆ ಸ್ಕೂಲ್, ಹೊಸೂರು ರಸ್ತೆ, ಬೆಂಗಳೂರು. ಯಶಸ್ ಗೌಡ, ಬಾಲಗಂಗಾಧರನಾಥ ಸ್ವಾಮೀಜಿ ಶಾಲೆ, ಚಿಕ್ಕಬಳ್ಳಾಪುರ. ಅನುಪಮ ಶೈಲೇಶ್, ಕುಮಾರೇಶ್ವರ ಹೈ ಸ್ಕೂಲ್, ಸವದತ್ತಿ. ಭೀಮನಗೌಡ ಹನುಮಂತಗೌಡ ಬಿರಾದಾರ ಪಾಟೀಲ, ಆಕ್ಸ್‌ಫರ್ಡ್ ಸ್ಕೂಲ್, ಮುದ್ದೇಬಿಹಾಳ ವಿಜಯಪುರ ರ್ಯಾಂಕ್ ಪಡೆದವರು.

ಗಮನಿಸಿ

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಫೋಟೋಕಾಪಿ ಪಡೆಯಲು ಮೇ. 08 ರಿಂದ ಮೇ.14ರವರೆಗೆ ಅವಕಾಶವಿದೆ. ಮರು ಮೌಲ್ಯ ಮಾಪನ ಮಾಡಲು ಮೇ.15 ರಿಂದ ಮೇ.21 ರವರೆಗೆ ಅವಕಾಶವಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ.08 ರಿಂದ ಮೇ. 15 ರವರೆಗೆ ಅವಕಾಶ ನೀಡಲಾಗಿದೆ.

andolanait

Share
Published by
andolanait

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

1 hour ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

2 hours ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

2 hours ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

3 hours ago