ಬೆಂಗಳೂರು: ರಾಜ್ಯದ ಈ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ.
ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯು (ಶೇ.96.8) ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲೆ ಎರಡನೇ ಸ್ಥಾನ (96.74) ಪಡೆದು ಕೊಂಡಿದ್ದು, ಮೂರನೇ ಸ್ಥಾನ ಹಾಸನ ಜಿಲ್ಲೆ (96.68) ಪಡೆದಿದೆ.
ಈ ಬಾರಿ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 59,246 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಉತ್ತೀರ್ಣರಾಗಿದ್ದಾರೆ.
ನಾಲ್ಕು ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಭೂಮಿಕಾ ಪೈ, ನ್ಯೂ ಮೆಕಾಲೆ ಸ್ಕೂಲ್, ಹೊಸೂರು ರಸ್ತೆ, ಬೆಂಗಳೂರು. ಯಶಸ್ ಗೌಡ, ಬಾಲಗಂಗಾಧರನಾಥ ಸ್ವಾಮೀಜಿ ಶಾಲೆ, ಚಿಕ್ಕಬಳ್ಳಾಪುರ. ಅನುಪಮ ಶೈಲೇಶ್, ಕುಮಾರೇಶ್ವರ ಹೈ ಸ್ಕೂಲ್, ಸವದತ್ತಿ. ಭೀಮನಗೌಡ ಹನುಮಂತಗೌಡ ಬಿರಾದಾರ ಪಾಟೀಲ, ಆಕ್ಸ್ಫರ್ಡ್ ಸ್ಕೂಲ್, ಮುದ್ದೇಬಿಹಾಳ ವಿಜಯಪುರ ರ್ಯಾಂಕ್ ಪಡೆದವರು.
ಗಮನಿಸಿ
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಫೋಟೋಕಾಪಿ ಪಡೆಯಲು ಮೇ. 08 ರಿಂದ ಮೇ.14ರವರೆಗೆ ಅವಕಾಶವಿದೆ. ಮರು ಮೌಲ್ಯ ಮಾಪನ ಮಾಡಲು ಮೇ.15 ರಿಂದ ಮೇ.21 ರವರೆಗೆ ಅವಕಾಶವಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ.08 ರಿಂದ ಮೇ. 15 ರವರೆಗೆ ಅವಕಾಶ ನೀಡಲಾಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…