ಶಿಕ್ಷಣ

TET- 2022 ರ ಪ್ರವೇಶ ಪತ್ರದಲ್ಲಿ ಸನ್ನಿ ಲಿಯೋನ್ ಚಿತ್ರವಿದ್ದ ಎಡವಟ್ಟಿಗೆ ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಟಿಇಟಿ 2022ರ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಚಿತ್ರ ಪ್ರಕಟ ಎಂಬ ಸುದ್ದಿಯು ಮಾಧ್ಯಮದಲ್ಲಿ ಬಿತ್ತರಗೊಳ್ಳುತ್ತಿದ್ದು ಇದು ಇಲಾಖೆ ಅಥವಾ ಸರ್ಕಾರದಿಂದ ಉಂಟಾಗಿರುವ ಲೋಪವಲ್ಲ ಎಂದು ಶಿಕ್ಷಣ ಇಲಾಖೆ ಸೃಷ್ಟೀಕರಣ ನೀಡಿದೆ.
ನ.6 ರಂದು ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ 781 ಕೇಂದ್ರಗಳಲ್ಲಿ ನಡೆಸಲಾಗಿದ್ದು, 3,32,913 ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಹಾಜರಾತಿ ಶೇಕಡಾ 92 ರಷ್ಟಿತ್ತು. ಪರೀಕ್ಷೆ ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪದೋಷಗಳಿಲ್ಲದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ ಎಂದು ಇಲಾಖೆ ತಿಳಿಸಿದೆ.ಪ್ರತಿ ಅಭ್ಯರ್ಥಿ ಪರೀಕ್ಷೆಗೆ ಆನ್​ಲೈನ್ ಅರ್ಜಿ ಸಲ್ಲಿಸುವ ಮುನ್ನ ತಾನೇ ತನ್ನ ಯೂಸರ್​ ಐಡಿ ಮತ್ತು ಪಾಸ್​ವರ್ಡ್​ ಅನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಕೊಳ್ಳುತ್ತಾರೆ. ಈ ರೀತಿಯಾಗಿ ಸೃಷ್ಟಿಸಿಕೊಂಡ ಯೂಸರ್​ ಐಡಿ ಮತ್ತು ಪಾಸ್​ವರ್ಡ್ ಮಾಹಿತಿಯು ಸಂಪೂರ್ಣ ಗೌಪ್ಯ ಹಾಗೂ ಅಭ್ಯರ್ಥಿಯ ಖಾಸಗಿ ಮಾಹಿತಿಯಾಗಿರುತ್ತದೆ. ಇದನ್ನು ಬಳಸಿಯೇ ಲಾಗಿನ್ ಆಗುವ ಮೂಲಕ ಅಭ್ಯರ್ಥಿ ತನ್ನ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ನಿಗದಿತ ಅಂಕಣದಲ್ಲಿ ಅಪ್‌ಲೋಡ್ ಮಾಡಿದ ನಂತರ, ತಾನು ನೀಡಿರುವ ಮಾಹಿತಿ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಅರ್ಜಿ ಸಬ್​ಮಿಟ್​ ಮಾಡಿದ ನಂತರವೇ ನಿಗದಿತ ಅರ್ಜಿ ಶುಲ್ಕ ಪಾವತಿಸಿ, ತನ್ನ ಆನ್‌ಲೈನ್ ಅರ್ಜಿಯ ಪ್ರಿಂಟ್ ಅನ್ನು ಪಡೆಯುತ್ತಾರೆ ಎಂದು ತಿಳಿಸಿದೆ.

andolanait

Share
Published by
andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago