ಶಿಕ್ಷಣ

TET- 2022 ರ ಪ್ರವೇಶ ಪತ್ರದಲ್ಲಿ ಸನ್ನಿ ಲಿಯೋನ್ ಚಿತ್ರವಿದ್ದ ಎಡವಟ್ಟಿಗೆ ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಟಿಇಟಿ 2022ರ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಚಿತ್ರ ಪ್ರಕಟ ಎಂಬ ಸುದ್ದಿಯು ಮಾಧ್ಯಮದಲ್ಲಿ ಬಿತ್ತರಗೊಳ್ಳುತ್ತಿದ್ದು ಇದು ಇಲಾಖೆ ಅಥವಾ ಸರ್ಕಾರದಿಂದ ಉಂಟಾಗಿರುವ ಲೋಪವಲ್ಲ ಎಂದು ಶಿಕ್ಷಣ ಇಲಾಖೆ ಸೃಷ್ಟೀಕರಣ ನೀಡಿದೆ.
ನ.6 ರಂದು ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ 781 ಕೇಂದ್ರಗಳಲ್ಲಿ ನಡೆಸಲಾಗಿದ್ದು, 3,32,913 ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಹಾಜರಾತಿ ಶೇಕಡಾ 92 ರಷ್ಟಿತ್ತು. ಪರೀಕ್ಷೆ ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪದೋಷಗಳಿಲ್ಲದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ ಎಂದು ಇಲಾಖೆ ತಿಳಿಸಿದೆ.ಪ್ರತಿ ಅಭ್ಯರ್ಥಿ ಪರೀಕ್ಷೆಗೆ ಆನ್​ಲೈನ್ ಅರ್ಜಿ ಸಲ್ಲಿಸುವ ಮುನ್ನ ತಾನೇ ತನ್ನ ಯೂಸರ್​ ಐಡಿ ಮತ್ತು ಪಾಸ್​ವರ್ಡ್​ ಅನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಕೊಳ್ಳುತ್ತಾರೆ. ಈ ರೀತಿಯಾಗಿ ಸೃಷ್ಟಿಸಿಕೊಂಡ ಯೂಸರ್​ ಐಡಿ ಮತ್ತು ಪಾಸ್​ವರ್ಡ್ ಮಾಹಿತಿಯು ಸಂಪೂರ್ಣ ಗೌಪ್ಯ ಹಾಗೂ ಅಭ್ಯರ್ಥಿಯ ಖಾಸಗಿ ಮಾಹಿತಿಯಾಗಿರುತ್ತದೆ. ಇದನ್ನು ಬಳಸಿಯೇ ಲಾಗಿನ್ ಆಗುವ ಮೂಲಕ ಅಭ್ಯರ್ಥಿ ತನ್ನ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ನಿಗದಿತ ಅಂಕಣದಲ್ಲಿ ಅಪ್‌ಲೋಡ್ ಮಾಡಿದ ನಂತರ, ತಾನು ನೀಡಿರುವ ಮಾಹಿತಿ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಅರ್ಜಿ ಸಬ್​ಮಿಟ್​ ಮಾಡಿದ ನಂತರವೇ ನಿಗದಿತ ಅರ್ಜಿ ಶುಲ್ಕ ಪಾವತಿಸಿ, ತನ್ನ ಆನ್‌ಲೈನ್ ಅರ್ಜಿಯ ಪ್ರಿಂಟ್ ಅನ್ನು ಪಡೆಯುತ್ತಾರೆ ಎಂದು ತಿಳಿಸಿದೆ.

andolanait

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

2 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

2 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

2 hours ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

2 hours ago