ಶಿಕ್ಷಣ

TET- 2022 ರ ಪ್ರವೇಶ ಪತ್ರದಲ್ಲಿ ಸನ್ನಿ ಲಿಯೋನ್ ಚಿತ್ರವಿದ್ದ ಎಡವಟ್ಟಿಗೆ ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಟಿಇಟಿ 2022ರ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಚಿತ್ರ ಪ್ರಕಟ ಎಂಬ ಸುದ್ದಿಯು ಮಾಧ್ಯಮದಲ್ಲಿ ಬಿತ್ತರಗೊಳ್ಳುತ್ತಿದ್ದು ಇದು ಇಲಾಖೆ ಅಥವಾ ಸರ್ಕಾರದಿಂದ ಉಂಟಾಗಿರುವ ಲೋಪವಲ್ಲ ಎಂದು ಶಿಕ್ಷಣ ಇಲಾಖೆ ಸೃಷ್ಟೀಕರಣ ನೀಡಿದೆ.
ನ.6 ರಂದು ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ 781 ಕೇಂದ್ರಗಳಲ್ಲಿ ನಡೆಸಲಾಗಿದ್ದು, 3,32,913 ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಹಾಜರಾತಿ ಶೇಕಡಾ 92 ರಷ್ಟಿತ್ತು. ಪರೀಕ್ಷೆ ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪದೋಷಗಳಿಲ್ಲದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ ಎಂದು ಇಲಾಖೆ ತಿಳಿಸಿದೆ.ಪ್ರತಿ ಅಭ್ಯರ್ಥಿ ಪರೀಕ್ಷೆಗೆ ಆನ್​ಲೈನ್ ಅರ್ಜಿ ಸಲ್ಲಿಸುವ ಮುನ್ನ ತಾನೇ ತನ್ನ ಯೂಸರ್​ ಐಡಿ ಮತ್ತು ಪಾಸ್​ವರ್ಡ್​ ಅನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಕೊಳ್ಳುತ್ತಾರೆ. ಈ ರೀತಿಯಾಗಿ ಸೃಷ್ಟಿಸಿಕೊಂಡ ಯೂಸರ್​ ಐಡಿ ಮತ್ತು ಪಾಸ್​ವರ್ಡ್ ಮಾಹಿತಿಯು ಸಂಪೂರ್ಣ ಗೌಪ್ಯ ಹಾಗೂ ಅಭ್ಯರ್ಥಿಯ ಖಾಸಗಿ ಮಾಹಿತಿಯಾಗಿರುತ್ತದೆ. ಇದನ್ನು ಬಳಸಿಯೇ ಲಾಗಿನ್ ಆಗುವ ಮೂಲಕ ಅಭ್ಯರ್ಥಿ ತನ್ನ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ನಿಗದಿತ ಅಂಕಣದಲ್ಲಿ ಅಪ್‌ಲೋಡ್ ಮಾಡಿದ ನಂತರ, ತಾನು ನೀಡಿರುವ ಮಾಹಿತಿ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಅರ್ಜಿ ಸಬ್​ಮಿಟ್​ ಮಾಡಿದ ನಂತರವೇ ನಿಗದಿತ ಅರ್ಜಿ ಶುಲ್ಕ ಪಾವತಿಸಿ, ತನ್ನ ಆನ್‌ಲೈನ್ ಅರ್ಜಿಯ ಪ್ರಿಂಟ್ ಅನ್ನು ಪಡೆಯುತ್ತಾರೆ ಎಂದು ತಿಳಿಸಿದೆ.

andolanait

Recent Posts

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

24 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

1 hour ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

2 hours ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

2 hours ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

2 hours ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

3 hours ago