ಶಿಕ್ಷಣ

TET- 2022 ರ ಪ್ರವೇಶ ಪತ್ರದಲ್ಲಿ ಸನ್ನಿ ಲಿಯೋನ್ ಚಿತ್ರವಿದ್ದ ಎಡವಟ್ಟಿಗೆ ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಟಿಇಟಿ 2022ರ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಚಿತ್ರ ಪ್ರಕಟ ಎಂಬ ಸುದ್ದಿಯು ಮಾಧ್ಯಮದಲ್ಲಿ ಬಿತ್ತರಗೊಳ್ಳುತ್ತಿದ್ದು ಇದು ಇಲಾಖೆ ಅಥವಾ ಸರ್ಕಾರದಿಂದ ಉಂಟಾಗಿರುವ ಲೋಪವಲ್ಲ ಎಂದು ಶಿಕ್ಷಣ ಇಲಾಖೆ ಸೃಷ್ಟೀಕರಣ ನೀಡಿದೆ.
ನ.6 ರಂದು ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ 781 ಕೇಂದ್ರಗಳಲ್ಲಿ ನಡೆಸಲಾಗಿದ್ದು, 3,32,913 ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಹಾಜರಾತಿ ಶೇಕಡಾ 92 ರಷ್ಟಿತ್ತು. ಪರೀಕ್ಷೆ ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪದೋಷಗಳಿಲ್ಲದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ ಎಂದು ಇಲಾಖೆ ತಿಳಿಸಿದೆ.ಪ್ರತಿ ಅಭ್ಯರ್ಥಿ ಪರೀಕ್ಷೆಗೆ ಆನ್​ಲೈನ್ ಅರ್ಜಿ ಸಲ್ಲಿಸುವ ಮುನ್ನ ತಾನೇ ತನ್ನ ಯೂಸರ್​ ಐಡಿ ಮತ್ತು ಪಾಸ್​ವರ್ಡ್​ ಅನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಕೊಳ್ಳುತ್ತಾರೆ. ಈ ರೀತಿಯಾಗಿ ಸೃಷ್ಟಿಸಿಕೊಂಡ ಯೂಸರ್​ ಐಡಿ ಮತ್ತು ಪಾಸ್​ವರ್ಡ್ ಮಾಹಿತಿಯು ಸಂಪೂರ್ಣ ಗೌಪ್ಯ ಹಾಗೂ ಅಭ್ಯರ್ಥಿಯ ಖಾಸಗಿ ಮಾಹಿತಿಯಾಗಿರುತ್ತದೆ. ಇದನ್ನು ಬಳಸಿಯೇ ಲಾಗಿನ್ ಆಗುವ ಮೂಲಕ ಅಭ್ಯರ್ಥಿ ತನ್ನ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ನಿಗದಿತ ಅಂಕಣದಲ್ಲಿ ಅಪ್‌ಲೋಡ್ ಮಾಡಿದ ನಂತರ, ತಾನು ನೀಡಿರುವ ಮಾಹಿತಿ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಅರ್ಜಿ ಸಬ್​ಮಿಟ್​ ಮಾಡಿದ ನಂತರವೇ ನಿಗದಿತ ಅರ್ಜಿ ಶುಲ್ಕ ಪಾವತಿಸಿ, ತನ್ನ ಆನ್‌ಲೈನ್ ಅರ್ಜಿಯ ಪ್ರಿಂಟ್ ಅನ್ನು ಪಡೆಯುತ್ತಾರೆ ಎಂದು ತಿಳಿಸಿದೆ.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

3 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

4 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

4 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

5 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

14 hours ago