ಶಿಕ್ಷಣ

ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಬ್ರೇಕ್‌ ಹಾಕಲು ಸರ್ಕಾರ ಬಿಗಿ ಕ್ರಮ

ಶಾಲಾ ಹಂತದಲ್ಲಿ ಆತ್ಮರಕ್ಷಣಾ ತರಬೇತಿ ನೀಡಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂಬಂಧಪಟ್ಟಂತೆ ಸರ್ಕಾರ ಬಿಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಶಾಲಾ ಹಂತದಲ್ಲಿ ಆತ್ಮರಕ್ಷಣಾ ತರಬೇತಿ ನೀಡುತ್ತಿದೆ ಎಂದು ಮಕ್ಕಳ ಮತ್ತು ಮಹಿಳಾ ಅಭಿವೃದ್ದಿ ಸಚಿವ ಆಚಾರ್ ಹಾಲಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್‌ನಲ್ಲಿ ಸದಸ್ಯರಾದ ಸಲೀಂ ಅಹಮ್ಮದ್ ಪರವಾಗಿ ವಿಪಕ್ಷ ನಾಉಕ ಬಿ.ಕೆ.ಹರಿಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಮಹಿಳೆಉರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿವರ ನೀಡಿದರು. ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಲು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಶಾಲೆಗಳಲ್ಲಿ ಕರಾಟೆ, ಜೂಡೋ, ತಾಕ್ವಾಂಡೊ ಆತ್ಮರಕ್ಷಣಾ ತರಬೇತಿಉನ್ನು ನೀಡಲಾಗುತ್ತಿದೆ. ಈವರೆಗೂ 1,754 ಮೆಟ್ರಿಕ್ ಪೂರ್ವ, 25 ಸಾವಿರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರು ತರಬೇತಿ ಪಡೆದಿದ್ದಾರೆ ಎಂದರು.
ಆದರೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು, ಈ ರೀತಿಯ ತರಬೇತಿಗಳಿಂದ ದೌರ್ಜನ್ಯ ನಿಲ್ಲುವುದಿಲ್ಲ. ಪೊಲೀಸ್ ಠಾಣೆಗಳನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಬೇಕು ಎಂದರು.
ಸದಸ್ಯೆ ಭಾರತಿ ಶೆಟ್ಟಿ ಅವರು ಸ್ವಾತಂತ್ರ್ಯದ  ನಂತರದಿಂದಲೂ ಈ ರೀತಿಯ ಪ್ರಕರಣದಿಂದ ತಲೆತಗ್ಗಿಸುವ ವಾತಾವರಣವಿದೆ. ಸರ್ಕಾರ ಶಾಲಾ ಶಿಕ್ಷಣದಲ್ಲಿ ನೈತಿಕ ಪಠ್ಯವನ್ನು ಅಳವಡಿಸಬೇಕೆಂದು ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರೆ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ದೌರ್ಜನ್ಯ ಪ್ರಕರಣಗಳು ತೀವ್ರಗೊಂಡಿವೆ ಎಂದು ಆಕ್ಷೇಪಿಸಿದರು.

andolanait

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

12 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

16 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

22 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

22 hours ago